Advertisement

ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ಹೇಳಿಕೆ: ರೇಣುಕಾಚಾರ್ಯ ಖಂಡನೆ

11:15 PM Nov 15, 2021 | Team Udayavani |

ಬೆಂಗಳೂರು: ಉಡುಪಿಯ ಪೇಜಾವರ ಶ್ರೀಗಳ ಬಗ್ಗೆ ಸಂಗೀತ ನಿರ್ದೇಶಕ ಹಂಸಲೇಖ ಅವರು ನೀಡಿರುವ ಹೇಳಿಕೆಯನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಖಂಡಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪೇಜಾವರ ಶ್ರೀಗಳ ಬಗ್ಗೆ ಎಲ್ಲ ಧರ್ಮದವರಿಗೆ ಗೌರವವಿದೆ.ಅವರನ್ನು ಪೂಜ್ಯ ಭಾವದಿಂದ ಕಾಣುತ್ತಾರೆ ಅಂಥವರ ಬಗ್ಗೆ ಹಂಸಲೇಖ ಅವರು ಕೀಳು ಮಟ್ಟದ ಹೇಳಿಕೆ ನೀಡಬಾರದಾಗಿತ್ತು ಎಂದರು.

ಸಂಗೀತ ನಿರ್ದೇಶಕ ಹಂಸಲೇಖ ಅವರ ಬಗ್ಗೆ ನನಗೆ ಗೌರವವಿತ್ತು. ಆದರೆ ಅವರು ಪ್ರಚಾರ ಪಡೆಯಲು ಹಿಂದುಗಳ ಭಾವನೆಗೆ ವಿರುದ್ಧವಾಗಿ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ ಎಂದು ದೂರಿದರು.ದಲಿತರು ಮತ್ತು ಮುಂದುವರಿದವರ ನಡುವಿನ ಕಂದಕವನ್ನು ಸರಿಪಡಿಸಲು ಪೇಜಾವರ ಶ್ರೀಗಳು ಶ್ರಮಿಸಿದ್ದಾರೆ. ಅದಕ್ಕಾಗಿ ಅವರು ದಲಿತರ ಕಾಲೊನಿಗಳಿಗೆ ಭೇಟಿ ಕೊಟ್ಟಿದ್ದರು ಮತ್ತು ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದಿದ್ದರು ಎಂದು ಹೇಳಿದರು.

ರಾಜ್ಯಾಧ್ಯಕ್ಷರು ಸೌಮ್ಯ ಸ್ವಭಾವದರು
ರಾಜರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿರುವ ಬಿಟ್‌ ಕಾಯಿನ್‌ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್‌ಕುಮಾರ್‌ ಕಟೀಲ್‌ ಮೌನವಾಗಿದ್ದಾರೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿ , ನಮ್ಮ ರಾಜ್ಯಾಧ್ಯಕ್ಷರದು ಸೌಮ್ಯ ಸ್ವಭಾವ.ಅವರು ಹಸುವಿನಂಥ ಮನುಷ್ಯ. ಅವರಿಗೆ ಭ್ರಷ್ಟಾಚಾರದ ಕಲ್ಪನೆಯೇ ಇಲ್ಲ; ಅವರು ಸಂಘಟನೆಯಲ್ಲೇ ತಮ್ಮನ್ನು ತೊಡಗಿಸಿಕೊಂಡವರು ಎಂದರು.ನಮ್ಮ ಅಧ್ಯಕ್ಷರು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next