Advertisement

Karnataka ಲೋಕಸಮರದ ಬಳಿಕ ಕೈ ಸರ್ಕಾರ ಉಳಿಯಲ್ಲ: ವಿಪಕ್ಷ ನಾಯಕ ಆರ್‌.ಅಶೋಕ್‌

08:47 PM Jan 29, 2024 | Team Udayavani |

ಚಿಂತಾಮಣಿ: ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಉಳಿಯುವುದಿಲ್ಲ ಎಂದು ರಾಜ್ಯದ ವಿರೋಧ ಪಕ್ಷದ ನಾಯಕರಾದ ಆರ್‌.ಅಶೋಕ್‌ ಹೇಳಿದರು.

Advertisement

ತಾಲೂಕಿನ ಸೀಕಲ್‌ ಗ್ರಾಮದಲ್ಲಿರುವ ಬಿಜೆಪಿ ಮುಖಂಡ ರಾಮಚಂದ್ರಗೌಡರ ನಿವಾಸದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲೂ ರಾಹುಲ್‌ ಗಾಂಧಿ ಬಿಜೆಪಿಯ ಸ್ಟಾರ್‌ ಕ್ಯಾಂಪೇನರ್‌ ಆಗಿದ್ದು, ರಾಹುಲ್‌ ಗಾಂಧಿ ಹೋದ ಕಡೆಯಲ್ಲೆಲ್ಲಾ ಬಿಜೆಪಿಗೆ ಅಭೂತಪೂರ್ವ ಗೆಲವು ದಕ್ಕಲಿದೆ ಎಂದು ವ್ಯಂಗ್ಯವಾಡಿದರು.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವಾಗ್ಧಾಳಿ ನಡೆಸಿದ ಅವರು, ಸಿದ್ದರಾಮಯ್ಯನವರ ಬಾಯಲ್ಲಿ ಮಾತ್ರ ರಾಮ, ಆದರೇ ಅವರ ದೇಹದಲ್ಲಿ ಮಾತ್ರ ಟಿಪ್ಪು ಸುಲ್ತಾನ್‌ ಇದ್ದಾನೆ. ಸಿದ್ದರಾಮಯ್ಯನವರ ಹಿಂದೂ ವಿರೋಧಿಯಾಗಿದ್ದಾರೆ ಎಂದ ಅವರು , ಕಾಂಗ್ರೆಸ್‌ನ ಹಲವು ಶಾಸಕರು ಅನುದಾನ ಇಲ್ಲವೆಂದು ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ, ಸಂಸದ ಎಸ್‌.ಮುನಿಸ್ವಾಮಿ, ಬಿಜೆಪಿ ಮುಖಂಡರಾದ ದೇವನಹಳ್ಳಿ ಜಿಎನ್‌ ವೇಣುಗೋಪಾಲ್‌, ಸೀಕಲ್‌ ರಾಮಚಂದ್ರಗೌಡ, ಮಾಜಿ ಶಾಸಕ ಎಂ.ರಾಜಣ್ಣ ಸೇರಿದಂತೆ ಮತಿತ್ತರರು ಉಪಸ್ಥಿತರಿದ್ದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next