Advertisement

ಕೈಗೆ ಗಾಯ: ಎರಡನೇ ಟಿ20ಯಿಂದ ಸಿರಾಜ್ ಹೊರಗೆ;ಹರ್ಷಲ್ ಪಟೇಲ್ ಪಾದಾರ್ಪಣೆ

07:30 PM Nov 19, 2021 | Team Udayavani |

ರಾಂಚಿ: ನ್ಯೂಜಿಲೆಂಡ್ ವಿರುದ್ಧದ ಸರಣಿಯ ಆರಂಭಿಕ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಎಡಗೈಗೆ ಗಾಯವಾದ ಕಾರಣ ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಶುಕ್ರವಾರ  ನಡೆಯುತ್ತಿರುವ ಎರಡನೇ ಟಿ20ಯಿಂದ ಹೊರಗುಳಿಯಬೇಕಾಗಿದೆ.

Advertisement

ಸಿರಾಜ್ ಆಯ್ಕೆಗೆ ಅಲಭ್ಯವಾಗಿರುವುದರಿಂದ ಹರ್ಷಲ್ ಪಟೇಲ್ ಅವರಿಗೆ ಭಾರತ ತಂಡಕ್ಕೆ ಪಾದಾರ್ಪಣೆ ಮಾಡುವ ಅವಕಾಶ ಸಿಕ್ಕಿದೆ.

“ಜೈಪುರದಲ್ಲಿ ನಡೆದ ಮೊದಲ ಟಿ 20 ಪಂದ್ಯದಲ್ಲಿ  ಸಿರಾಜ್  ಫೀಲ್ಡಿಂಗ್ ಮಾಡುವಾಗ   ಎಡಗೈಯಲ್ಲಿ ಗಾಯವಾಗಿತ್ತು.

ಬಿಸಿಸಿಐ ವೈದ್ಯಕೀಯ ತಂಡವು ಅವರ ಗಾಯದ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ” ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

ಭಾರತ ಐದು ವಿಕೆಟ್‌ಗಳಿಂದ ಗೆದ್ದ ಮೊದಲ ಪಂದ್ಯದಲ್ಲಿ ಸಿರಾಜ್ ನಾಲ್ಕು ಓವರ್‌ಗಳಲ್ಲಿ 39 ರನ್ ನೀಡಿ ಒಂದು ವಿಕೆಟ್ ಪಡೆದಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next