Advertisement

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

11:25 PM Jul 06, 2024 | Team Udayavani |

ಹುಬ್ಬಳ್ಳಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣವನ್ನು ಸಿಬಿಐಗೆ ವಹಿಸಿದರೆ ಮಾತ್ರ ನಿಷ್ಪಕ್ಷ ತನಿಖೆ ಸಾಧ್ಯವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಮೇಲ್ನೋಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪುತ್ರನ ನೇರಕ್ಕೆ ನಡೆದಿರುವ ಹಗರಣವಾಗಿದೆ. ತರಾತುರಿಯಲ್ಲಿ ಜಿಲ್ಲಾಧಿಕಾರಿ ವರ್ಗಾವಣೆ ಮಾಡಿರುವುದು ಭ್ರಷ್ಟಾಚಾರದಲ್ಲಿ ತಾವು ಭಾಗಿ ಎಂಬುದನ್ನು ಸಾಬೀತುಪಡಿಸಿದೆ ಎಂದರು.

2014ರಿಂದ 2018ರಲ್ಲಿ ಇದರ ಪ್ರಮುಖ ಬೆಳವಣಿಗೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಮತ್ತು ಮಗನ ಅನುಮತಿ ಇಲ್ಲದೆ ಇದು ನಡೆಯಲು ಸಾಧ್ಯವಿಲ್ಲ ಎಂಬುದು ಮೇಲ್ನೋಟಕ್ಕೆ ವ್ಯಕ್ತವಾಗುತ್ತಿದೆ. ಸ್ವಂತ ಲಾಭ ಮಾಡಿಕೊಳ್ಳಲು ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ. ಏನೂ ಮಾಡಿಲ್ಲ ಅಂದರೆ ತರಾತುರಿಯಲ್ಲಿ ಜಿಲ್ಲಾ ಧಿಕಾರಿಯನ್ನು ಯಾವ ಕಾರಣಕ್ಕೆ ವರ್ಗಾವಣೆ ಮಾಡಿದ್ದೀರಿ ಎಂದು ಪ್ರಶ್ನಿಸಿದರು.

ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣದಲ್ಲಿ ನೇರವಾಗಿ ಸಿಎಂ ಭಾಗಿಯಾಗಿದ್ದಾರೆ. ಈ ಪ್ರಕರಣಗಳನ್ನು ಮುಚ್ಚಿ ಹಾಕಲು ಸರಕಾರ ಮುಂದಾಗಿದೆ. ಇಷ್ಟು ದಿನ ಮಾಜಿ ಸಚಿವ ನಾಗೇಂದ್ರ ತಪ್ಪಿಸಿಕೊಳ್ಳಲು ಅವಕಾಶ ನೀಡಿ ಈಗ ನೋಟಿಸ್‌ ನೀಡಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next