Advertisement

ಯುದ್ಧ ಬೇಡ ಎಂದಾದರೆ ಪಿಒಕೆಯನ್ನು ಭಾರತಕ್ಕೆ ಹಸ್ತಾಂತರಿಸಿ; ಪಾಕ್ ಗೆ ಅಠಾವಳೆ

10:12 AM Sep 15, 2019 | Team Udayavani |

ನವದೆಹಲಿ:ಒಂದು ವೇಳೆ ಪಾಕಿಸ್ತಾನಕ್ಕೆ ಯುದ್ಧ ಬೇಡ ಎಂದಾದರೆ, ಇದರಿಂದ ಪಾಕಿಸ್ತಾನಕ್ಕೆ ಒಳ್ಳೆಯದು ಎಂಬುದಾಗಿ ಇಮ್ರಾನ್ ಖಾನ್ ಪಾಕಿಸ್ತಾನದ ಹಿತಾಸಕ್ತಿಯ ನೆಲೆಯಲ್ಲಿ ಆಲೋಚಿಸಿ ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ವನ್ನು ಭಾರತಕ್ಕೆ ಹಸ್ತಾಂತರಿಸಲಿ ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ.

Advertisement

ವರದಿಗಳ ಪ್ರಕಾರ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಜನರು ಸಂತೋಷವಾಗಿಲ್ಲ. ಅಲ್ಲಿನ ಜನರು ಭಾರತದ ಜತೆ ಸೇರಲು ಬಯಸುತ್ತಿದ್ದಾರೆ ಎಂದು ಅಠಾವಳೆ ಚಂಡೀಗಢದಲ್ಲಿ ಮಾತನಾಡುತ್ತ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದ ವಿಚಾರದಲ್ಲಿ ಪಾಕಿಸ್ತಾನ ಮತ್ತೊಮ್ಮೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಫಲವಾಗಿದೆ. ಒಂದು ವೇಳೆ ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತಕ್ಕೆ ಹಸ್ತಾಂತರಿಸಿದರೆ ನಾವು ಅಲ್ಲಿ ಹಲವು ಕೈಗಾರಿಕೆಗಳನ್ನು ಸ್ಥಾಪಿಸುತ್ತೇವೆ. ಅಷ್ಟೇ ಅಲ್ಲ ವ್ಯವಹಾರಿಕವಾಗಿಯೂ ನಾವು ಪಾಕಿಸ್ತಾನಕ್ಕೆ ನೆರವು ನೀಡುತ್ತೇವೆ. ಬಡತನ ನಿರ್ಮೂಲನೆ ಮತ್ತು ನಿರುದ್ಯೋಗ ಸಮಸ್ಯೆ ಹೋಗಲಾಡಿಸಲು ನೆರವು ನೀಡುವುದಾಗಿ ಅಠಾವಳೆ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next