Advertisement

ಯಲ್ಲಾಲಿಂಗ ಪ್ರಕರಣ ಸಿಬಿಐಗೆ ವಹಿಸಿ

11:49 AM Sep 15, 2019 | Team Udayavani |

ಕೊಪ್ಪಳ: ಜಿಲ್ಲೆಯ ಕನಕಗಿರಿ ತಾಲೂಕಿನ ಕನಕಾಪೂರ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಒತ್ತಾಯಿಸಿ ಯಲ್ಲಾಲಿಂಗನ ತಾಯಿ ಕೆಂಚಮ್ಮಾ ಅಗಸಿಮಂದಿನ್‌ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

Advertisement

ಕೊಪ್ಪಳದ ರೈಲ್ವೆ ಸ್ಟೇಷನ್‌ ಸಮೀಪ 2005, ಜ. 11ರಂದು ಯಲ್ಲಾಲಿಂಗ ದೇಹ ತುಂಡರಿಸಿದ ರೀತಿಯಲ್ಲಿ ಪತ್ತೆಯಾಗಿತ್ತು. ಉದ್ದೇಶ ಪೂರ್ವಕ ಕೊಲೆ ಮಾಡಿರುವುದಾಗಿ ಆರೋಪಿಸಿ ಸರ್ಕಾರಕ್ಕೆ ಮನವಿ ಮಾಡಿದ್ದೆವು. ಆಗ ತಾವು ನಮ್ಮ ಮನೆಗೆ ಭೇಟಿ ನೀಡಿ ಸ್ಪಂದಿಸಿ ಸರ್ಕಾರದ ಮಟ್ಟದಲ್ಲಿ ತನಿಖೆಗೆ ಒತ್ತಾಯಿಸಿದ್ದೀರಿ. ಈ ಹಿನ್ನೆಲೆಯಲ್ಲಿ ಅಂದಿನ ಸರ್ಕಾರವನ್ನು ಪ್ರಕರಣ ಸಿಐಡಿಗೆ ವಹಿಸಿತ್ತು. ಪ್ರಕರಣದಲ್ಲಿ ಒಂಬತ್ತು ಆರೋಪಿಗಳನ್ನು ಸಿಐಡಿ ತಂಡ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಅದರಲ್ಲಿ ಮೊದಲ ಆರೋಪಿ ಹನುಮೇಶ್‌ ನಾಯಕ್‌ ಜಾಮೀನು ಪಡೆದು ಹೊರ ಬಂದಿದ್ದು, ನಮ್ಮ ಕುಟುಂಬ ಮೇಲೆ ಮತ್ತೆ ದೌರ್ಜನ್ಯ ಎಸಗುತ್ತಿದ್ದಾನೆ. ಅವರ ಸಹೋದರ ರಮೇಶ ನಾಯಕ್‌ ಎಲ್ಲ ಸಾಕ್ಷಿಗಳಿಗೆ ಹಣದ ಆಮಿಷ ತೋರಿಸಿ, ಹೆದರಿಸಿ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಸಿದ್ದಾರೆ. ಇದರಿಂದ ನಮ್ಮ ಮಗನ ಸಾವಿಗೆ ನ್ಯಾಯ ಸಿಗುತ್ತಿಲ್ಲವೆಂದು ತಾಯಿ ಕೆಂಚಮ್ಮ ಸಿಎಂ ಮುಂದೆ ಅಳಲು ತೋಡಿಕೊಂಡಿದ್ದಾಳೆ.

ರಮೇಶ ಮಾನಪ್ಪ ನಾಯಕ್‌ ಅಂದಿನ ಸಚಿವರಾಗಿದ್ದ ಶಿವರಾಜ ತಂಗಡಗಿ ಅವರ ಪ್ರಭಾವ ಬಳಸಿ ಪ್ರಕರಣದಿಂದ ಹೆಸರು ತೆಗೆಸಲಾಗಿದೆ. ಉಳಿದವರು ಬೇಲ್ ಪಡೆದು ಹೊರ ಬಂದಿದ್ದಾರೆ. ಕೂಡಲೇ ಈತನನ್ನು ವಿಚಾರಣೆ ಮಾಡಬೇಕು. ಇದರಲ್ಲಿ ಈತನ ಪಾತ್ರವೂ ಇದೆ ಎಂದು ಆರೋಪಿಸಿದ ಅವರು, ಈ ಪ್ರಕರಣ ನಡೆದು ಐದು ವರ್ಷ ಗತಿಸಿದ್ದು, ಸರ್ಕಾರ ಯಾವುದೇ ಪರಿಹಾರ ಕೊಟ್ಟಿಲ್ಲ. ಹೀಗಾಗಿ ನಮ್ಮ ಕುಟುಂಬ ಬೀದಿ ಪಾಲಾಗಿದ್ದು, ಸರ್ಕಾರವು ಕೂಡಲೇ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next