Advertisement

ಕೋವಿಡ್‌ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸಿ

03:12 PM Jul 18, 2020 | Suhan S |

ಚಿತ್ರದುರ್ಗ: ಕೋವಿಡ್‌ 19 ಸಂದರ್ಭವನ್ನು ಪೊಲೀಸರು ಸಮರ್ಥವಾಗಿ ನಿಭಾಯಿಸಬೇಕು ಎಂದು ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಹೇಳಿದರು.

Advertisement

ಶುಕ್ರವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಪೊಲೀಸರು ವೈಯಕ್ತಿಕ ಆರೋಗ್ಯ ರಕ್ಷಣೆಯ ಕಡೆಗೆ ಹೆಚ್ಚು ಗಮನ ಹರಿಸಬೇಕು. ನಾವು ಆರೋಗ್ಯವಾಗಿದ್ದಾಗ ಸಮಾಜವನ್ನು ರಕ್ಷಿಸಬಹುದು. ಈ ನಿಟ್ಟಿನಲ್ಲಿ ಸ್ಯಾನಿಟೈಸರ್‌, ಫೇಸ್‌ ಮಾಸ್ಕ್, ಫೇಸ್‌ ಶೀಲ್ಡ್ ಬಳಕೆ ಮಾಡಿ ಎಂದು ಸಲಹೆ ನೀಡಿದರು. ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ತೆಗೆದುಕೊಳ್ಳುವ ತೀರ್ಮಾನಗಳು ಯಶ್ವಸಿಯಾಗುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಕೊರೊನಾ ವೈರಾಣು ಸಮಸ್ಯೆ ತಾರ್ಕಿಕ ಅಂತ್ಯ ಕಾಣುವವರೆಗೆ ನಮ್ಮ ಪ್ರಯತ್ನ ನಿರಂತರವಾಗಿರಲಿ ಎಂದು ತಿಳಿಸಿದರು.

ದಾವಣಗೆರೆ ಪೂರ್ವ ವಲಯ ಐಜಿಪಿ ಎಸ್‌. ರವಿ, ಎಸ್ಪಿ ಜಿ. ರಾಧಿಕಾ, ಎಎಸ್ಪಿ ಮಹಾನಿಂಗ ನಂದಗಾವಿ, ಡಿವೈಎಸ್ಪಿ ಪಾಂಡುರಂಗಪ್ಪ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next