Advertisement

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ

05:06 PM Dec 04, 2019 | Suhan S |

ಬೆಳಗಾವಿ: ತೆಲಂಗಾಣದ ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಬೆಂಕಿ ಹಚ್ಚಿ ಕೊಲೆಗೈದ ದುಷ್ಕರ್ಮಿಗಳಿಗೆ ಮರಣ ದಂಡನೆ ನೀಡುವಂತೆ ಆಗ್ರಹಿಸಿ ಕರ್ನಾಟಕ ಪಶು ವೈದ್ಯಕೀಯ ಸಂಘದ ಜಿಲ್ಲಾ ಘಟಕ ವತಿಯಿಂದ ಮಂಗಳವಾರ ಜಿಲ್ಲಾ ಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿ ಹಾಗೂ ತೆಲಂಗಾಣ ಸರ್ಕಾರಕ್ಕೆ ಮನವಿ ರವಾನಿಸಲಾಯಿತು.ಇದಕ್ಕೂ ಮೊದಲು ಸಂಘದ ಸದಸ್ಯರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟಿಸಿದರು.

Advertisement

ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚಾಗುತ್ತಿರುವುದು ದುರ್ದೈವದ ಸಂಗತಿ. ಇಡೀ ದೇಶವೇ ತಲೆ ತಗ್ಗಿಸುವಂಥ ಸ್ಥಿತಿ ನಿರ್ಮಾಣವಾಗಿದೆ.ಮಹಿಳೆಯರನ್ನು ರಾಕ್ಷಸರು ಅತ್ಯಾಚಾರ ಎಸಗಿ ಕೊಲೆ ಮಾಡುತ್ತಿರುವ ಪ್ರಕರಣಗಳಿಗೆ ಕಡಿವಾಣ ಹಾಕಬೇಕು. ಮಹಿಳೆಯರ ರಕ್ಷಣೆಗೆ ಕಠಿಣ ಕಾನೂನು ಜಾರಿಗೊಳಿಸಬೇಕು. ಕಾಮುಕರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.ಈ ವೇಳೆ ಗೌರವ ಅಧ್ಯಕ್ಷ ಡಾ| .ಕೆ. ಚಂದ್ರಶೇಖರ, ಅಧ್ಯಕ್ಷ ಡಾ| ಮಲ್ಲಿಕಾರ್ಜುನ ಹುಂಡೇಕರ, ಉಪಾಧ್ಯಕ್ಷ ಡಾ| ರಾಜು ಮೇತ್ರಿ, ಪ್ರಧಾನ ಕಾರ್ಯದರ್ಶಿ ಡಾ| ಸಿ.ವಿ. ಧರಣೆಪ್ಪಗೌಡ್ರ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next