Advertisement

Hanur: ಜಿಂಕೆ ಬೇಟೆಯಾಡಿ ಮಾಂಸ ಸಾಗಾಣಿಕೆ ಮಾಡುತ್ತಿದ್ದ ಇಬ್ಬರ ಬಂಧನ; ಓರ್ವ ನಾಪತ್ತೆ

10:49 AM Jul 20, 2023 | Team Udayavani |

ಹನೂರು: ಜಿಂಕೆ ಬೇಟೆಯಾಡಿ ಮಾಂಸ ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ನಾಪತ್ತೆಯಾಗಿರುವ ಮತ್ತೋರ್ವನ ಪತ್ತೆಗೆ ಅರಣ್ಯ ಇಲಾಕೆ ಅಧಿಕಾರಿಗಳು ಬಲೆ ಬೀಸಿದ್ದಾರೆ.

Advertisement

ರಾಮಾಪುರ ಗ್ರಾಮದ ಕೃಷ್ಣಮೂರ್ತಿ ಮತ್ತು ಅಪ್ರಾಪ್ತ ಬಾಲಕ ಅಜಿತ್‌ಕುಮಾರ್ ಬಂಧಿತ ಆರೋಪಿಗಳಾಗಿದ್ದು, ನಾಪತ್ತೆಯಾಗಿರುವ ಗೆಜ್ಜಲನತ್ತ ಗ್ರಾಮದ ಆರ್ಮುಗಂ ಬಂಧನಕ್ಕಾಗಿ ಬಲೆ ಬೀಸಲಾಗಿದೆ.

ಈ 3 ಜನ ಆರೋಪಿಗಳು ಮತ್ತು ಶೆಟ್ಟಿಯೂರು ಗಸ್ತಿನ ವ್ಯಾಪ್ತಿಯ ಸ.ನಂ 105/1 ಮತ್ತು 105/2ರ ಜಮೀನಿನಲ್ಲಿ ಜಿಂಕೆಯನ್ನು ಬೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ದೊರೆತ ಕೂಡಲೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖಾ ಅಧಿಕಾರಿಗಳ ತಂಡ ದಾಳಿ ನಡೆಸಿ ಇಬ್ಬರನ್ನು ಬಂಧಿಸಿ ಬಂಧಿತರಿಂದ ಜಿಂಕೆ ಮಾಂಸ, ಉರುಳುಗಳು ಮತ್ತು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ದಾಳಿಯಲ್ಲಿ ಉಪವಲಯ ಅರಣ್ಯಾಧಿಕಾರಿ ಮಧುಕುಮಾರ್,ಅರಣ್ಯ ಪಾಲಕರಾದ ಬಿಲ್ಲಪ್ಪ, ಗಣೇಶ್ ಪ್ರಸಾದ್, ಬೀರಪ್ಪ ಹಳ್ಳಿ ಮತ್ತು ಕಳ್ಳಬೇಟೆ ತಡೆ ಶಿಬಿರದ ಸಿಬ್ಬಂದಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next