Advertisement

ಪ್ರಧಾನಿ 20 ಲಕ್ಷ ಕೋಟಿ ಪ್ಯಾಕೇಜ್‌ಗೆ ಸ್ವಾಗತ

04:25 AM May 16, 2020 | Suhan S |

ಚಿಕ್ಕೋಡಿ: ಲಾಕ್‌ಡೌನ್‌ ಜಾರಿಯಲ್ಲಿರುವುದರಿಂದ ಜನರು ಆರ್ಥಿಕವಾಗಿ ಸಂಕಷ್ಟ ಎದುರಿಸಬಾರದೆಂದು ಪ್ರಧಾನಿ ನರೇಂದ್ರ ಮೋದಿ ಅವರು 20 ಲಕ್ಷ ಕೋಟಿ ರೂ. ಪರಿಹಾರ ಘೋಷಿಸಿರುವುದು ಸ್ವಾಗತಾರ್ಹ ಎಂದು ಶಾಸಕ ದುರ್ಯೋಧನ ಐಹೊಳೆ ತಿಳಿಸಿದರು.

Advertisement

ಈ ಕುರಿತು ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬಡವರು, ಮಧ್ಯಮ ವರ್ಗ,ನಿರುದ್ಯೋಗಿ ಯುವಕರು, ವಲಸೆ ಕಾರ್ಮಿಕರು, ರೈತರು ಹಾಗೂ ಇತರರಿಗೆ ಪ್ರಧಾನಿ ಮೋದಿ 20 ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಿರುವುದು ದೇಶದ ಇತಿಹಾಸದಲ್ಲಿಯೇ ಒಂದು ಹೊಸ ದಾಖಲೆ ನಿರ್ಮಿಸಿದೆ ಎಂದರು. ರಾಯಬಾಗ ಕ್ಷೇತ್ರ ವ್ಯಾಪ್ತಿಯ ಬಡ ಹಾಗೂ ಕೂಲಿ ಕಾರ್ಮಿಕರಿಗೆ ದಿನಸಿ ಆಹಾರ ಕಿಟ್‌ ಹಾಗೂ ಎಲ್ಲ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಮಾಸ್ಕ್ ವಿತರಿಸಲಾಗಿದೆ ಎಂದು ದುರ್ಯೋಧನ ಐಹೊಳೆ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next