Advertisement

ಎಸ್‌.ಎಂ.ಕೃಷ್ಣ ದಸರಾ ಉದ್ಘಾಟಿಸುತ್ತಿರುವುದು ಸಂತಸ ತಂದಿದೆ : ಎಚ್.ವಿಶ್ವನಾಥ್

11:43 AM Oct 06, 2021 | Team Udayavani |

ಮೈಸೂರು: ನಾಡಹಬ್ಬ ಮೈಸೂರು ದಸರಾವನ್ನು ಹಿರಿಯ ನಾಯಕ ಎಸ್‌.ಎಂ.ಕೃಷ್ಣ ಅವರು ಉದ್ಘಾಟಿಸುತ್ತಿರುವ ಕುರಿತು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಅವರು ಬುಧವಾರ ಸಂತಸ ವ್ಯಕ್ತಪಡಿಸಿದ್ದಾರೆ .

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ದಸರಾ ಉದ್ಘಾಟನೆಗೆ ಸಾಂಸ್ಕೃತಿಕ ವ್ಯಕ್ತಿತ್ವದ ರಾಜಕೀಯ ಮುತ್ಸದ್ದಿ ಎಸ್‌.ಎಂ. ಕೃಷ್ಣ ಅವರಿಗೆ ಆಹ್ವಾನ ನೀಡಿರುವುದು ಸ್ವಾಗತಾರ್ಹ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದೆ ಎಂದರು.

ರಾಜಕಾರಣದ ಬಗ್ಗೆ ಇದ್ದ ತಾತ್ಸಾರದ ಮನೋಭಾವ ದೂರ ಮಾಡುವ ನಿಟ್ಟಿನಲ್ಲಿ ಇದೊಂದು ಸೂಕ್ತ ತೀರ್ಮಾನ. ಇದುವರೆಗೂ ಸಾಹಿತಿ, ವಿಜ್ಞಾನಿಗಳು ಸೇರಿದಂತೆ ಹಲವು ಕ್ಷೇತ್ರದ ಗಣ್ಯರು ಉದ್ಘಾಟಿಸಿದ್ದರು. ರಾಜಕೀಯ ಕ್ಷೇತ್ರದ ಎಸ್‌.ಎಂ. ಕೃಷ್ಣ ಉದ್ಘಾಟಿಸುತ್ತಿರುವುದು ಸಂತಸ ತಂದಿದೆ ಎಂದರು.

ಎಸ್‌‌.ಎಂ‌.ಕೃಷ್ಣ ಅವರು ಹಿರಿಯ ರಾಜಕಾರಣಿಗಳು, ಜನಾದೇಶ ಪಾಲಿಸಿ ಆಡಳಿತ ನಡೆಸಿದವರು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next