Advertisement

Harangi Dam ; ಸೆಲ್ಫಿ ತೆಗೆಯುತ್ತಿದ್ದ ವೇಳೆ ಪ್ರವಾಸಿಗ ನೀರುಪಾಲು

08:23 PM Aug 03, 2023 | Team Udayavani |

ಕುಶಾಲನಗರ(ಕೊಡಗು) : ಹಾರಂಗಿ ಜಲಾಶಯದ ಬಳಿ ಸೆಲ್ಫಿ ತೆಗೆಯುತ್ತಿದ್ದ ವೇಳೆ ಪ್ರವಾಸಿಗ ಯುವಕಯೊಬ್ಬ ನೀರುಪಾಲಾಗಿರುವ ಘಟನೆ ಗುರುವಾರ ನಡೆದಿದೆ.

Advertisement

ನೀರು ಪಾಲಾದ ಯುವಕ ಬೆಂಗಳೂರು ಮೂಲದ ಸಂದೀಪ್ ಎಂದು ತಿಳಿದು ಬಂದಿದೆ. ಮೂವರು ಸ್ನೇಹಿತರೊಂದಿಗೆ ಪ್ರವಾಸಕ್ಕೆ ಆಗಮಿಸಿದ್ದ ಎಂದು ತಿಳಿದು ಬಂದಿದೆ.

ಜಲಾಶಯದ ಮುಂಭಾಗದಲ್ಲಿರುವ ಸೇತುವೆ ಬಳಿ ನೀರುಪಾಲಾಗಿರುವುದಾಗಿ ತಿಳಿದು ಬಂದಿದ್ದು, ಸ್ಥಳಕ್ಕಾಗಮಿಸಿರುವ ಪೊಲೀಸರು, ಅಗ್ನಿಶಾಮಕದಳದ ಸಿಬಂದಿಗಳು ಶೋಧ ನಡೆಸುತ್ತಿದ್ದಾರೆ. ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next