Advertisement

ಮಾಸ್ಕ್-ಸ್ಯಾನಿಟೈಸರ್‌ ಕಡ್ಡಾಯ: ಡಾ|ನಾಗವೇಣಿ

04:47 PM May 06, 2020 | Naveen |

ಹರಪನಹಳ್ಳಿ: ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ತಹಶೀಲ್ದಾರ್‌ ಡಾ.ನಾಗವೇಣಿ ಅವರ ಅಧ್ಯಕ್ಷತೆಯಲ್ಲಿ ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರು ಮತ್ತು ಸಗಟು ವ್ಯಾಪಾರಿಗಳ ಸಭೆ ನಡೆಯಿತು.

Advertisement

ಜಿಲ್ಲಾಧಿಕಾರಿಗಳ ನಿರ್ದೇಶಿಸಿದಂತೆ ಲಾಕ್‌ಡೌನ್‌ ಸಡಿಲಿಕೆ ಮಾಡಲಾಗಿದೆ. ಪಟ್ಟಣದಲ್ಲಿ ವ್ಯಾಪಾರಕ್ಕೆ ಸಮಯ ಬೆಳಗ್ಗೆ 7 ರಿಂದ ಸಂಜೆ 7ರವರೆಗೆ ಅವಕಾಶ ಕಲ್ಪಿಸಲಾಗಿದೆ. ಅಂಗಡಿಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ, ಸ್ಯಾನಿಟೈಸರ್‌, ಥರ್ಮಲ್‌ ಸ್ಕ್ಯಾನರ್‌, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ವ್ಯಾಪಾರಿಗಳಿಗೆ ತಹಶೀಲ್ದಾರ್‌ ಸೂಚಿಸಿದರು.

ಪುರಸಭೆಯ ಮುಖ್ಯಾಧಿಕಾರಿ ಬಿ.ಆರ್‌.ನಾಗರಾಜನಾಯ್ಕ ಮಾತನಾಡಿ, ಮಾಸ್ಕ್ ಮತ್ತು ಸಾನಿಟೈಸರ್‌, ಸಾಮಾಜಿಕ ಅಂತರ ಕಾಪಾಡದೇ ಇರುವವರಿಗೆ ಪುರಸಭೆಯಿಂದ ದಂಡ ವಿಧಿ ಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಬಿ.ಮಂಜುನಾಥ, ಲೋಕ್ಯಾನಾಯ್ಕ, ವರ್ತಕರ ಸಂಘದ ಪಿ.ಕೆ.ಪ್ರಸನ್ನಕುಮಾರಜೈನ್‌, ಮಹಾವೀರ ಭಂಡಾರಿ ಇತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next