Advertisement

ಉದ್ಯೋಗ ಖಾತ್ರಿ ಕಾಮಗಾರಿಗೆ ಚಾಲನೆ

07:37 PM May 10, 2020 | Naveen |

ಹರಪನಹಳ್ಳಿ: ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ತಾಲೂಕಿನ ಅರಸೀಕೆರೆ ಗ್ರಾಮದ ಬಾವಿ ಹತ್ತಿರದ ಕೆರೆಯ ಹೂಳು ತೆಗೆಯುವ ಕಾಮಗಾರಿಗೆ ಸಂಸದ ವೈ.ದೇವೇಂದ್ರಪ್ಪ ಗುದ್ದಲಿ ಪೂಜೆ ನೆರವೇರಿಸಿದರು.

Advertisement

ಖಾತ್ರಿ ಕೆಲಸ ನಿರತರಿಗೆ ಸ್ಥಳದಲ್ಲಿ ಕುಡಿಯಲು ಶುದ್ಧ ನೀರು, ಮಾಸ್ಕ್, ಕೈ ತೊಳೆಯಲು ಸ್ಯಾನಿಟೈಸರ್‌ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಕೊರೊನಾ ವೈರಸ್‌ನಿಂದ ಇಡೀ ದೇಶವೇ ಲಾಕ್‌ಡೌನ್‌ ಆಗಿರುವುದರಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬಡವರಿಗೆ, ನಿರ್ಗತಿಕರಿಗೆ, ರೈತರಿಗೆ ಉದ್ಯೋಗ ಖಾತ್ರಿ ಯೋಜನೆ ವರದಾನವಾಗಿದೆ ಎಂದು ತಿಳಿಸಿದರು.

ಗ್ರಾಪಂ ಅಧ್ಯಕ್ಷೆ ವಿಜಯಲಕ್ಷ್ಮಿ, ಮುಖಂಡರಾದ ಪೂಜಾರ್‌ ಮರಿಯಪ್ಪ, ಪಿಡಿಓ ಹಾಲೇಶಪ್ಪ, ಖಾತ್ರಿ ಯೋಜನೆ ಸಹಾಯಕ ನಿರ್ದೇಶಕ ತಮ್ಮನಾಯ್ಕ, ಸದಸ್ಯರಾದ ಜೆ.ಬಸವರಾಜ್‌, ತಿಮ್ಮಲಾಪುರ ಪರಸಪ್ಪ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next