Advertisement

ಉತ್ಸಾಹದಿಂದ ಪರೀಕ್ಷೆ ಬರೆದ ವಿದ್ಯಾರ್ಥಿಗಳು

07:03 PM Jun 29, 2020 | Naveen |

ಹರಪನಹಳ್ಳಿ: ಕೋವಿಡ್ ಪಾಸಿಟವ್‌ ಹೆಡ್‌ಕಾನ್ಸ್‌ಟೇಬಲ್‌ ಅವರು ಜೂ.25ರಂದು ತಾಲೂಕಿನ ಉಚ್ಚಂಗಿದುರ್ಗ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿದ್ದ ಹಿನ್ನೆಲೆಯಲ್ಲಿ ಆತಂಕಗೊಂಡಿದ್ದ ವಿದ್ಯಾರ್ಥಿಗಳು ಅಧಿಕಾರಿಗಳ ಮನವೊಲಿಕೆ ಹಿನ್ನೆಲೆಯಲ್ಲಿ ಉತ್ಸಾಹದಿಂದಲೇ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ಗಣಿತ ವಿಷಯ ಪರೀಕ್ಷೆ ಬರೆದರು.

Advertisement

ಒಟ್ಟು 269 ವಿದ್ಯಾರ್ಥಿಗಳು ಹಾಜರಿದ್ದು, 5 ವಿದ್ಯಾರ್ಥಿಗಳು ಗೈರಾಗಿದ್ದರು. ಪರೀಕ್ಷಾ ಕೇಂದ್ರಕ್ಕೆ ಸ್ಯಾನಿಟೈಸ್‌ ಮಾಡಲಾಗಿತ್ತು. ಮಕ್ಕಳಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಆತ್ಮವಿಶ್ವಾಸ ತುಂಬಿದ ಹಿನ್ನೆಲೆಯಲ್ಲಿ ಮಕ್ಕಳು ಯಾವುದೇ ಭಯವಿಲ್ಲದೇ ಪರೀಕ್ಷೆಗೆ ಹಾಜರಾದರು.

ಪರೀಕ್ಷಾ ಕೇಂದ್ರಕ್ಕೆ ಬಿಇಒ ವೀರಭದ್ರಯ್ಯ ಭೇಟಿ ನೀಡಿ ಸುರಕ್ಷತೆ ಬಗ್ಗೆ ಮಾಹಿತಿ ಪಡೆದುಕೊಂಡರು. ತಾಲೂಕಿನ ಒಟ್ಟು 13 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಗಣಿತ ವಿಷಯಕ್ಕೆ ಒಟ್ಟು 3796 ನೋಂದಣಿ ಮಾಡಿಕೊಂಡಿದ್ದು, 116 ಮಕ್ಕಳು ಗೈರು ಹಾಜರಾಗಿ, 3680 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next