Advertisement

ಸೋನಿಯಾ ಗಾಂಧಿ ಮೇಲೆ ಸುಳ್ಳು ಆರೋಪ ಮಾಡಿ ಕಿರುಕುಳ ನೀಡುತ್ತಿದೆ: ರಮಾನಾಥ ರೈ

11:34 AM Jul 22, 2022 | Team Udayavani |

ಮಂಗಳೂರು: ಸೋನಿಯಾ ಗಾಂಧಿಯವರ ಮೇಲೆ ಸುಳ್ಳು ಆರೋಪ ಮಾಡಿ ವಿಚಾರಣೆಗೆ ಒಳಪಡಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಕಿಡಿಕಾರಿದರು.

Advertisement

ಸೋನಿಯಾಗಾಂಧಿಯವರ ಇಡಿ ವಿಚಾರಣೆ ವಿರುದ್ದ ಮಂಗಳೂರಿನ ಕ್ಲಾಕ್ ಟವರ್‌ ಬಳಿ ನಡೆದ ಪ್ರತಿಭಟನೆಯಲ್ಲಿ ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಸೋನಿಯಾ ಗಾಂಧಿಯವರು ಪ್ರಧಾನಿಯಾಗಬಹುದಿತ್ತು. ಆದರೆ ಅವರು ನಯವಾಗಿ ತಿರಸ್ಕರಿಸಿದ್ದರು. ಅವರಿಗೆ ಅಧಿಕಾರದ ಆಸೆ ಇರಲಿಲ್ಲ. ಕಾಂಗ್ರೆಸ್ ವರ್ಚಸ್ಸು ಕುಗ್ಗುಸುವ, ಹೆದರಿಸುವ ಪ್ರಯತ್ನವಾಗಿ ಸರಕಾರ ವಿಚಾರಣೆ ಮಾಡುತ್ತಿದೆ ಎಂದರು.

ಈಶ್ವರಪ್ಪನವರ ಪ್ರಕರಣದಲ್ಲಿ ಬಿ ರಿಪೋರ್ಟ್ ಹಾಕಿದ್ದಾರೆ. ಬೇಕಾದವರನ್ನು ರಕ್ಷಿಸುತ್ತಿದ್ದಾರೆ. ಬಿಜೆಪಿಯವರ ಮೇಲೆ ಇಡಿ ತನಿಖೆ ನಡೆಯುತ್ತಿಲ್ಲ. ಬಿಜೆಪಿ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ದ್ರೌಪದಿ ಮುರ್ಮು ಅವರಿಗೆ ದಾಖಲೆ ಮತದ ಗೆಲುವು: ನಳಿನ್‍ ಕುಮಾರ್ ಕಟೀಲ್ ಅಭಿನಂದನೆ

Advertisement

ಬಳಿಕ ಮಾತನಾಡಿದ ಮಾಜಿ ಶಾಸಕ ಮಧು ಬಂಗಾರಪ್ಪ, ಬಿಜೆಪಿಯವರು ದೇಶವನ್ನು ಅಧೋಗತಿಗೆ ಕೊಂಡೊಯ್ಯುತ್ತಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡುತ್ತಿರುವುದು ಖಂಡನೀಯ ಎಂದರು.

ಈ ವೇಳೆ  ಮಾಜಿ ಶಾಸಕ ಜೆ.ಆರ್. ಲೋಬೋ, ಶಕುಂತಳಾ ಶೆಟ್ಟಿ, ಮೊಯಿದಿನ್ ಬಾವಾ, ಐವನ್ ಡಿಸೋಜಾ, ಮುಖಂಡರಾದ ಮಿಥುನ್ ರೈ ಮೊದಲಾದವರು ಭಾಗಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next