Advertisement

ಅಪ್ರಾಪ್ತ ಬಾಲಕಿ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ ; ಅಪರಾಧಿಗೆ 10 ವರ್ಷ ಶಿಕ್ಷೆ

07:16 PM Mar 29, 2021 | Team Udayavani |

ಕೊಪ್ಪಳ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ತಾಲೂಕಿನ ಹನುಮನಳ್ಳಿಯ ಶ್ರೀನಾಥ ಭೋವಿ ಎಂಬ ವ್ಯಕ್ತಿಯ ಮೇಲಿನ ಆರೋಪವು ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶ (ಪೋಕ್ಸೋ) ಶಂಕರ ಎಂ. ಜಾಲವಾದಿ ಅವರು ಆರೋಪಿಗೆ ಶಿಕ್ಷೆ
ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

Advertisement

ಕೊಪ್ಪಳ ಗ್ರಾಮೀಣ ಪೋಲಿಸ್ ಠಾಣೆ ವ್ಯಾಪ್ತಿಯ ಹನುಮನಳ್ಳಿ ಗ್ರಾಮದ ಶ್ರೀನಾಥ ಭೋವಿ ಎಂಬ ಆರೋಪಿ ಹನುಮನಳ್ಳಿ ಗ್ರಾಮದ ಅಪ್ರಾಪ್ತ ವಯಸ್ಸಿನ ಬಾಲಕಿಯ ಪರಿಚಯ ಮಾಡಿಕೊಂಡು ಪ್ರೀತಿಸುವುದಾಗಿ ಮತ್ತು ಮದುವೆಯಾಗುವುದಾಗಿ ನಂಬಿಸಿ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಹೋಗಿ ಲೈಂಗಿಕ ದೌರ್ಜನ್ಯ ಎಸಗಿ ನಂತರ 2016ರ ಆಗಸ್ಟ್. 02 ರಂದು ರಾತ್ರಿ ವೇಳೆಯಲ್ಲಿ ಅವಳಿಗೆ ಪುಸಲಾಯಿಸಿ ಅಪಹರಣ ಮಾಡಿ ಮಂತ್ರಾಲಯಕ್ಕೆ ಹೋಗಿ ಅಲ್ಲಿ ಒಂದು ಲಾಡ್ಜ್‌ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪವು ತನಿಖೆಯಲ್ಲಿ ಸಾಭಿತಾಗಿದ್ದರಿಂದ ಆರೋಪಿಯ ವಿರುದ್ಧ ಕೊಪ್ಪಳ ಸಿಪಿಐ ಭೀಮಣ್ಣ ಸೂರಿ ಅವರು ದೋಷಾರೋಪಣೆ ಸಲ್ಲಿಸಿದ್ದರು.

ಇದನ್ನೂ ಓದಿ :ಬ್ಯಾನರ್ಜಿಗೆ ಮತ ಚಲಾಯಿಸಿದರೆ, ಬಂಗಾಳ ಮಿನಿ ಪಾಕಿಸ್ತಾನ  : ಸುವೇಂದು ಅಧಿಕಾರಿ

ಈ ಪ್ರಕರಣದ ತನಿಖೆಯಲ್ಲಿ ಆರೋಪಿತನ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿ ಶ್ರೀನಾಥ ಭೋವಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ರೂ. 25 ಸಾವಿರ ದಂಡ ವಿಧಿಸಿ, ದಂಡದ ಮೊತ್ತದಲ್ಲಿ ರೂ. 20 ಸಾವಿರಗಳನ್ನು ಬಾಧಿತಳಿಗೆ ನೀಡುವಂತೆ ನ್ಯಾಯಾಧೀಶ ಶಂಕರ ಎಂ. ಜಾಲವಾದಿ ಅವರು ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಗೌರಮ್ಮ ದೇಸಾಯಿ ಅವರು ಪ್ರಕರಣವನ್ನು ನಡೆಸಿ ವಾದ ಮಂಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next