Advertisement

ಧನ್ಯಶ್ರೀಗೆ ಕಿರುಕುಳ ನೀಡಿದ್ದ ಆರೋಪಿ ಸೆರೆ‌

06:35 AM Jan 12, 2018 | Team Udayavani |

ಚಿಕ್ಕಮಗಳೂರು: ವಿದ್ಯಾರ್ಥಿನಿ ಧನ್ಯಶ್ರೀಗೆ ವಾಟ್ಸ್‌ ಆ್ಯಪ್‌ನಲ್ಲಿ ಮೆಸೇಜ್‌ ಹಾಗೂ ಫೋನ್‌ ಕರೆ ಮಾಡಿ ಕಿರುಕುಳ ನೀಡಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. 

Advertisement

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಡಗಕಜೇಕಾರ್‌ ಗ್ರಾಮದ ನಿವಾಸಿ ಸಂತೋಷ್‌ ಬಂಧಿತ ಆರೋಪಿ. ಲಿಫ್ಟ್ ಮೆಕಾನಿಕ್‌ ಆಗಿರುವ ಸಂತೋಷ್‌, ಧನ್ಯಶ್ರೀಯೊಂದಿಗೆ ಮಾತನಾಡಿ  ನಂತರ ಅವರ ತಂದೆ-ತಾಯಿಗೆ ಬೆದರಿಕೆ ಹಾಕಿ, ಆ ಸಂಭಾಷಣೆಯ ಸ್ಕ್ರೀನ್‌ಶಾಟ್‌ಗಳನ್ನು ಕೆಲವು ವ್ಯಕ್ತಿ ಮತ್ತು ಸಂಘಟನೆಗಳಿಗೆ ಕಳುಹಿಸಿ ಧನ್ಯಶ್ರೀ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನನ್ನು ಬಂಧಿಸಲು ಮೂಡಿಗೆರೆ ಸಬ್‌ಇನ್‌ ಸ್ಪೆಕ್ಟರ್‌ ಎಂ.ರμàಕ್‌ ನೇತೃತ್ವದ ತಂಡ ಬೆಂಗಳೂರಿನಲ್ಲಿ ಸಂತೋಷ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next