Advertisement

ಮಹಿಳೆಯರಿಗೆ ಲೈಂಗಿಕ ಕಿರುಕುಳ ಕೇಸ್: ವೈದ್ಯಾಧಿಕಾರಿಗೆ ಜಾಮೀನು, ಬಿಡುಗಡೆ

08:15 PM Nov 29, 2021 | Team Udayavani |

ಮಂಗಳೂರು: ತನ್ನ ಕಚೇರಿಯ ಮಹಿಳಾ ಸಿಬಂದಿ ಜತೆ ಕಚೇರಿ ವೇಳೆ ಅಸಭ್ಯವಾಗಿ ವರ್ತಿಸುವ ಜತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಕ್ರಮ ಅಧಿಕಾರಿ ಡಾ| ರತ್ನಾಕರ್‌ ಅವರಿಗೆ 3ನೇ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದ್ದು, ಸೋಮವಾರ ಅವರು ಬಿಡುಗಡೆಯಾಗಿದ್ದಾರೆ.

Advertisement

ಮಹಿಳಾ ಸಿಬಂದಿಗಳ ಜತೆ ಕಚೇರಿ ವೇಳೆ ಅಸಭ್ಯವಾಗಿ ವರ್ತಿಸುವ ಫೋಟೊ ಹಾಗೂ ವೀಡಿಯೋ ತುಣುಕು ಜಾಲತಾಣದಲ್ಲಿ ವೈರಲ್‌ ಆಗಿತ್ತು. ಸುಮಾರು 2-3 ತಿಂಗಳ ಹಿಂದೆ ಈ ಘಟನೆ ಸಂಭವಿಸಿದ್ದು,ತಡವಾಗಿ ಬೆಳಕಿಗೆ ಬಂದಿತ್ತು. ರತ್ನಾಕರ್‌ ಮಹಿಳಾ ಸಿಬಂದಿ ಜತೆ ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯಾವಳಿಗಳು ಮಾಧ್ಯಮದಲ್ಲಿ ಶುಕ್ರವಾರ ಪ್ರಸಾರವಾದ ಬೆನ್ನಲ್ಲೇ ಕಚೇರಿ ಸಿಬಂದಿಯೊಬ್ಬರು ನಗರ ಪೊಲೀಸ್‌ ಆಯುಕ್ತರು ಹಾಗೂ ಮಹಿಳಾ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇಲೆ ಆರೋಪಿ ರತ್ನಾಕರ್‌ನನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು
ವಶಕ್ಕೆ ಪಡೆದುಕೊಂಡಿದ್ದರು.

ಇದನ್ನೂ ಓದಿ :ಸಂಸದೆಯರೊಂದಿಗಿನ ಟ್ವೀಟ್ ವೈರಲ್: ಶಶಿ ತರೂರ್ ಕ್ಷಮೆ ಕೇಳಿದ್ದೇಕೆ ?

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next