Advertisement

ಮೇಲಧಿಕಾರಿಗಳ ಕಿರುಕುಳ: ಆರೋಗ್ಯಾಧಿಕಾರಿ ಆತ್ಮಹತ್ಯೆ

01:53 AM Aug 21, 2020 | mahesh |

ಮೈಸೂರು: ನಂಜನಗೂಡು ತಾಲೂಕು ಪ್ರಭಾರ ಆರೋಗ್ಯಾಧಿಕಾರಿ, ಮೈಸೂರಿನ ಆಲನಹಳ್ಳಿ ಬಡಾವಣೆ ನಿವಾಸಿ ಡಾ| ಎಸ್‌. ಆರ್‌. ನಾಗೇಂದ್ರ (43) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋವಿಡ್‌-19 ಕೆಲಸದ ಒತ್ತಡ ಹಾಗೂ ಮೇಲಧಿ ಕಾರಿಗಳ ಕಿರುಕುಳವೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಅವರು ಜನವರಿ ಯಿಂದ ನಂಜನಗೂಡಿನಲ್ಲಿ ಸೇವೆ ಸಲ್ಲಿಸುತ್ತಿದ್ದರು.

Advertisement

ತಾಲೂಕು ಆರೋಗ್ಯಾಧಿಕಾರಿ ಯಾಗಿದ್ದ ಡಾ| ಕಲಾವತಿ ಅವರನ್ನು ಮೈಸೂರಿಗೆ ವರ್ಗಾಯಿಸಿದ ಬಳಿಕ ನಾಗೇಂದ್ರ ಅವರ ಕಾರ್ಯಕ್ಷಮತೆ ಮೆಚ್ಚಿ ಅವರನ್ನು ತಾಲೂಕು ಪ್ರಭಾರ ಆರೋಗ್ಯ ಅಧಿಕಾರಿಯನ್ನಾಗಿ ಮಾಡಲಾಗಿತ್ತು. ಚಿಕ್ಕ ವಯಸ್ಸಿಗೆ ಅಧಿಕಾರಿಯಾಗಿದ್ದ ಇವರಿಗೆ ಹಿರಿಯ ವೈದ್ಯರು ಸಹಕಾರ ನೀಡುತ್ತಿರಲಿಲ್ಲ ಹಾಗೂ ಕೋವಿಡ್‌ ಹಿನ್ನೆಲೆಯಲ್ಲಿ 6 ತಿಂಗಳುಗಳಿಂದ ನಿರಂತರವಾಗಿ ಕರ್ತವ್ಯ ನಿರ್ವಹಿಸಿ ಕೆಲಸದ ಒತ್ತಡ ಹೆಚ್ಚಾಗಿತ್ತು ಎನ್ನಲಾಗಿದೆ. ಈ ಎರಡು ಕಾರಣಗಳಿಂದ ತನ್ನನ್ನು ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗೆ ಪತ್ರವನ್ನೂ ಬರೆದಿದ್ದರು ಎನ್ನಲಾಗಿದೆ.

30 ಲ. ರೂ. ಪರಿಹಾರ
ಆರೋಗ್ಯ ಅಧಿಕಾರಿ ಡಾ| ಎಸ್‌. ಆರ್‌. ನಾಗೇಂದ್ರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಅವರು, ವೈದ್ಯರ ಕುಟುಂಬಕ್ಕೆ 30 ಲ. ರೂ. ಪರಿಹಾರ ಹಾಗೂ ಕುಟುಂ ಓರ್ವ ಸದಸ್ಯನಿಗೆ ಉದ್ಯೋಗ ನೀಡು ವುದಾಗಿ ಭರವಸೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next