Advertisement

Karkala: ಕಿರುಕುಳ- ವ್ಯಕ್ತಿ ಪೊಲೀಸ್‌ ವಶಕ್ಕೆ

11:36 PM Dec 28, 2023 | Team Udayavani |

ಕಾರ್ಕಳ: ನಗರದ ಖಾಸಗಿ ಹಣಕಾಸು ಸಂಸ್ಥೆಯ ಉದ್ಯೋಗಿ ಯುವತಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಸ್ಥಳಿಯರು ನಗರದ ಬಸ್‌ ನಿಲ್ದಾಣದಲ್ಲಿ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಡಿ. 27ರಂದು ಸಂಜೆ ನಡೆದಿದೆ.

Advertisement

ಇರ್ವತ್ತೂರು ನಿವಾಸಿ ಜಗದೀಶ್‌ ಪೂಜಾರಿ ಯುವತಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿ. ಈತ ಕಳೆದ ಕೆಲವು ದಿನಗಳಿಂದ ಯುವತಿಯನ್ನು ಹಿಂಬಾಲಿಸಿ ದಾರಿ ಮಧ್ಯೆ ಮಾತನಾಡಲು ಯತ್ನಿಸಿ ಕಿರುಕುಳ ನೀಡುತ್ತಿದ್ದ. ಸಂಜೆ ಯುವತಿ ಕಚೇರಿಯಿಂದ ಕೆಲಸ ಮುಗಿಸಿ ನಂದಳಿಕೆ ಭಾಗದ ತನ್ನ ಮನೆಗೆ ತೆರಳಲೆಂದು ಹೊರಟು ಬಸ್‌ ನಿಲ್ದಾಣದ ಕಡೆಗೆ ತೆರಳುತ್ತಿದ್ದ ವೇಳೆ ವ್ಯಕ್ತಿ ಹಿಂಬಾಲಿಸಿದ್ದಾನೆ. ಅಡ್ಡಗಟ್ಟಿ ಮಾತನಾಡಿಸಲು ಯತ್ನಿಸಿದ್ದ ವೇಳೆ ಯುವತಿ ಪ್ರತಿರೋಧ ವ್ಯಕ್ತಪಡಿಸಿದ್ದಾಳೆ. ಇದೇ ವೇಳೆ ಸ್ಥಳೀಯರು ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈತ ಈ ಹಿಂದೆ ಕೂಡ ಅನೇಕ ಯುವತಿಯರಿಗೆ ಕಿರುಕುಳವನ್ನು ನೀಡುತ್ತಿದ್ದನೆಂದು ಘಟನೆಯ ಬಳಿಕ ಬೆಳಕಿಗೆ ಬಂದಿದೆ. ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಆತನ ವಿರುದ್ಧ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next