Advertisement

Arrested: ವಿದ್ಯಾರ್ಥಿನಿಯ ಹಿಂಬಾಲಿಸಿ ಲೈಂಗಿಕ ಕಿರುಕುಳ: ವ್ಯಕ್ತಿ ಬಂಧನ

10:51 AM Mar 26, 2024 | Team Udayavani |

ಬೆಂಗಳೂರು: ಕಾಲೇಜಿಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡಿದ ಆರೋಪಿಯನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಜಯನಗರ ನಿವಾಸಿ ಸುರೇಶ್‌(26) ಬಂಧಿತ.

ಆರೋಪಿ ಇತ್ತೀಚೆಗೆ ಜಯ ನಗರದ ಖಾಸಗಿ ಕಾಲೇಜು ಸಮೀಪದ ಜಾಯ್‌ ಪಾಯಿಂಟ್‌ ಬಳಿ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿ ಯೊಬ್ಬಳನ್ನು ಹಿಂಬಾಲಿಸಿ ಆಕೆಯ ಖಾಸಗಿ ಅಂಗ ಸ್ಪರ್ಶಿಸಿ ಕಿರುಕುಳ ನೀಡಿದ್ದ. ಅದರಿಂದ ಗಾಬರಿಗೊಂಡ ಆಕೆ ಜೋರಾಗಿ ರಕ್ಷಣೆಗೆ ಕೂಗಿದ್ದಾಳೆ. ಅಲ್ಲೇ ಇದ್ದ ಕಾಲೇಜಿನ ಇತರೆ ವಿದ್ಯಾರ್ಥಿಗಳು ಆಕೆಯ ನೆರವಿಗೆ ಧಾವಿಸಿ, ಸುರೇಶ್‌ ಮೇಲೆ ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸುರೇಶ್‌ ಮದ್ಯ ಮತ್ತು ಮಾದಕ ವಸ್ತು ವ್ಯಸನಿಯಾದ್ದ ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next