Advertisement

ಸಾರ್ವಜನಿಕರು ಸ್ವಯಂಪ್ರೇರಿತ ಕರ್ಫ್ಯೂಗೆ ಒಳಪಡಬೇಕು, ಅಗತ್ಯವೆನಿಸಿದರೆ ಕಠಿಣ ಕ್ರಮ: ಕೋಟ

08:25 AM Apr 27, 2020 | keerthan |

ಬಂಟ್ವಾಳ:  ಕೋವಿಡ್-19 ಪ್ರಕರಣಗಳು  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕಾರಣ ಅಗತ್ಯವಾದರೆ ಜಿಲ್ಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ  ಸೂಚಿಸಿದ್ದಾರೆ

Advertisement

ಬಂಟ್ವಾಳ ತಾಲ್ಲೂಕಿನ ಕಸಬಾ  ಪ್ರದೇಶದಲ್ಲಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಸಚಿವರು ಹಾಗೂ ಸಂಸದರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ತುರ್ತು ಸಭೆ ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ನಡೆಯಿತು.

ಬಂಟ್ವಾಳದಲ್ಲಿ ಮೇ 3ರವರೆಗೆ ಲಾಕ್ ಡೌನ್‌ನಲ್ಲಿ ಯಾವುದೇ ವಿನಾಯಿತಿ ಇಲ್ಲ.  ಕಸಬಾ ಹೋಬಳಿಯ 92 ಮನೆಗಳು ಹಾಗೂ ನರಿಕೊಂಬು ಗ್ರಾಮಪಂಚಾಯತ್ ವ್ಯಾಪ್ತಿಯ 213 ಮನೆಗಳಲ್ಲಿ ಪ್ರತಿನಿತ್ಯ ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಸಿಬ್ಬಂದಿಗಳು ಭೇಟಿಕೊಟ್ಟು ವರದಿ ನೀಡಬೇಕು. ಬಂಟ್ವಾಳ ಕಸಬಾ ಹಾಗೂ ನರಿಕೊಂಬು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಲಾಕ್ ಡೌನ್ ನಲ್ಲಿ ಯಾವುದೇ ವಿನಾಯಿತಿ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ದ.ಕ.  ಜಿಲ್ಲೆಯಲ್ಲಿ ಒಟ್ಟು 19 ಕೋವಿಡ್ ಪ್ರಕರಣಗಳು ವರದಿಯಾಗಿದ್ದು ಇದರಲ್ಲಿ12 ಪ್ರಕರಣಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುತ್ತಾರೆ.  ಇಬ್ಬರು ಸಾವನ್ನಪ್ಪಿದ್ದು, ಉಳಿದ ಪ್ರಕರಣಗಳಲ್ಲಿ ನಿಗಾವಹಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಇತ್ತೀಚೆಗೆ ಮೃತಪಟ್ಟ ಸೋಂಕಿತೆ ಮೊದಲು ಚಿಕಿತ್ಸೆ ಪಡೆದಿದ್ದ ಖಾಸಗಿ ಆಸ್ಪತ್ರೆಯ 198 ಸಿಬ್ಬಂದಿಗಳು ಹಾಗೂ ಇನ್ನಿತರರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ಈ ಪೈಕಿ 49 ಪ್ರಕರಣಗಳ ವರದಿ ಬಂದಿದ್ದು, 48 ನೆಗೆಟಿವ್ ಒಂದು ಪಾಸಿಟಿವ್ ಆಗಿರುತ್ತದೆ

Advertisement

ಜಿಲ್ಲಾಡಳಿತದ ಪೂರ್ಣ ಕಣ್ಗಾವಲಿನಲ್ಲಿ ಸೋಂಕು ನಿಯಂತ್ರಣ ಮಾಡಲಾಗುತ್ತಿದೆ.  ಸಾರ್ವಜನಿಕರು ಯಾವುದೇ ಕಾರಣಕ್ಕೆ ಘಟನೆಗಳನ್ನು ಲಘುವಾಗಿ ತೆಗೆದುಕೊಳ್ಳದೆ, ಸ್ವಯಂ ಪ್ರೇರಿತ ಕರ್ಫ್ಯೂಗೆ ಒಳಪಡಬೇಕು ಎಂದು ಮನವಿ ಮಾಡಿರುವ ಸಚಿವರು, ಅನಿವಾರ್ಯವಾದರೆ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಬಂಟ್ವಾಳ ಕಸಬಾ ಹಾಗೂ ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿ ಸೀಲ್ಡ್ ಡೌನ್ ಮಾಡಲಾಗಿದ್ದು, ವಿಶೇಷ ಅಧಿಕಾರಿಗಳನ್ನು ನೇಮಕ ಮಾಡಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಮ್ ತೆರೆದು  ಸಾರ್ವಜನಿಕರ ಅನುಕೂಲಕ್ಕೆ  ದೂರವಾಣಿ ಸಂಪರ್ಕ ನೀಡಲಾಗಿದೆ. 11 ಅಧಿಕಾರಿಗಳನ್ನು ಈ ಪ್ರದೇಶದಲ್ಲಿ ಹಗಲು-ರಾತ್ರಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಸಾರ್ವಜನಿಕರು ಮನೆಯಲ್ಲಿದ್ದುಕೊಂಡು ಅಗತ್ಯ ಸಾಮಾಗ್ರಿಗಳನ್ನು ತೆಗೆದುಕೊಳ್ಳಬಹುದು. ದಿನಸಿ ಸಾಮಗ್ರಿ, ಹಾಲು ದಿನಪತ್ರಿಕೆ, ಔಷಧಿ,  ಊಟೋಪಚಾರ ತರಕಾರಿ ಹಣ್ಣು ಮಾಂಸಗಳನ್ನು ಸಾರ್ವಜನಿಕರ ಬೇಡಿಕೆಯಂತೆ ಒದಗಿಸಲು ಹಾಗೂ ಬ್ಯಾಂಕಿಂಗ್ ಸೇವೆ ಗ್ಯಾಸ್  ಇನ್ನಿತರ ಸೇವೆ ತುರ್ತು ಸೇವೆಗಳನ್ನು ಒದಗಿಸಲು ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ ಎಂದು ಕೋಟ‌ ಶ್ರೀನಿವಾಸ ಪೂಜಾರಿ ಹೇಳಿದರು.

ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು. ಅಧಿಕಾರಿಗಳು ಕಟ್ಟೆಚ್ಚರದಿಂದ ಕಾರ್ಯನಿರ್ವಹಿಸಬೇಕು, ವಲಸೆ ಕಾರ್ಮಿಕರು ಹಾಗೂ ಜಿಲ್ಲೆಯ ಸಮಸ್ಯೆಗಳಿಗೆ ತಕ್ಷಣ ಪರಿಹರಿಸಬೇಕು. ಆಹಾರಗಳ ಪೂರೈಕೆ ಸೇರಿದಂತೆ ಸ್ಥಳೀಯ ಶಾಸಕರಿಗೆ ಸಹಕಾರ ನೀಡಲಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ತಹಶೀಲ್ದಾರ್ ರಶ್ಮಿ, ತಾಲೂಕು ಮಟ್ಟದ ಅಧಿಕಾರಿಗಳು  ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next