Advertisement

ಮರ್ಯಾದೆ ಉಳಿಸಿದ ಹಾರ್ದಿಕ್, ಜಡೇಜಾ: ಆಸೀಸ್ ಗೆ ಸ್ಪರ್ಧಾತ್ಮಕ ಗುರಿ ನೀಡಿದ ಟೀಂ ಇಂಡಿಯಾ

12:37 PM Dec 02, 2020 | keerthan |

ಕ್ಯಾನ್ ಬೆರಾ: ಮೂರನೇ ಏಕದಿನ ಪಂದ್ಯದಲ್ಲೂ ಬ್ಯಾಟಿಂಗ್ ಕುಸಿತ ಕಂಡಿದ್ದ ಟೀಂ ಇಂಡಿಯಾವನ್ನು ಆಲ್ ರೌಂಡರ್ ಗಳಾದ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ತಮ್ಮ ಬ್ಯಾಟಿಂಗ್ ಸಾಹಸದಿಂದ ಆಧರಿಸಿದ್ದಾರೆ. ಭಾರತ ತಂಡ ನಿಗದಿತ 50 ಓವರ್ ಗಳಲ್ಲಿ 302 ರನ್ ಗಳಿಸಿ ಆಸೀಸ್ ಗೆ ಸ್ಪರ್ಧಾತ್ಮಕ ಗುರಿ ನೀಡಿದೆ.

Advertisement

ಸರಣಿಯಲ್ಲಿ ಮೊದಲ ಬಾರಿಗೆ ಟಾಸ್ ಗೆದ್ದ ವಿರಾಟ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆದರೆ ಶಿಖರ್ ಧವನ್ ಅಗ್ಗಕ್ಕೆ ವಿಕೆಟ್ ಒಪ್ಪಿಸಿದರು. ಉತ್ತಮವಾಗಿ ಆಡುತ್ತಿದ್ದ ಗಿಲ್ ಕೂಡಾ 33 ರನ್ ಗಳಿಸಿ ಔಟಾದರು. ನಾಯಕ ವಿರಾಟ್ ಕೊಹ್ಲಿ 63 ರನ್ ಗಳಿಸಿ ತಂಡವನ್ನು ಆಧರಿಸಿದರೆ ಶ್ರೇಯಸ್ ಅಯ್ಯರ್ ಮತ್ತು ಕೆ ಎಲ್ ರಾಹುಲ್ ಕಳಪೆ ಬ್ಯಾಟಿಂಗ್ ಫಾರ್ಮ್ ಮನೇಕಾ ಓವಲ್ ಅಂಗಳದಲ್ಲೂ ಮುಂದುವರಿಯಿತು.

152 ರನ್ ಗೆ ಐದು ವಿಕೆಟ್ ಕಳೆದುಕೊಂಡಲ್ಲಿಗೆ ಜೊತೆಯಾದ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ತಂಡವನ್ನು ಆಧರಿಸಿದರು. ನಿಧಾನವಾಗಿ ಇನ್ನಿಂಗ್ಸ್ ಕಟ್ಟಿದ ಇವರು ಕೊನೆಯಲ್ಲಿ ಆರ್ಭಟಿಸಿದರು.

ಆರನೇ ವಿಕೆಟ್ ಗೆ ಹಾರ್ದಿಕ್ – ಜಡೇಜಾ ಅಜೇಯ 150 ರನ್ ಜೊತೆಯಾಟವಾಡಿದರು. ಹಾರ್ದಿಕ್ ಪಾಂಡ್ಯ 76 ಎಸೆತಗಳಲ್ಲಿ 92 ರನ್ ಗಳಿಸಿದರೆ, ರವೀಂದ್ರ ಜಡೇಜಾ 50 ಎಸೆತಗಳಲ್ಲಿ 66 ರನ್ ಬಾರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next