Advertisement

Hardik Pandya; ದೇವರ ಮೊರೆ ಹೋದ ಹಾರ್ದಿಕ್: ಸೋಮನಾಥ ದೇವಸ್ಥಾನಕ್ಕೆ ಭೇಟಿ

09:48 AM Apr 06, 2024 | Team Udayavani |

ಮುಂಬೈ: ಸತತ ಸೋಲು ಮತ್ತು ಪ್ರೇಕ್ಷಕರ ವರ್ತನೆಯಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರು ಈಗ ದೇವರ ಮೊರೆ ಹೋಗಿದ್ದಾರೆ. ಗುಜರಾತ್ ನ ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡಿರುವ ಹಾರ್ದಿಕ್, ವಿಶೇಷ ಪೂಜೆ ಸಲ್ಲಿಸಿದ್ದಾರೆ.

Advertisement

ಸಾಂಪ್ರದಾಯಿಕ ಉಡುಪು ಧರಿಸಿದ ಪಾಂಡ್ಯ ಪೂಜೆ ಸಲ್ಲಿಸಿದ್ದಾರೆ. ಸೋಮನಾಥ ದೇವಾಲಯವು ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾಗಿ ಐತಿಹಾಸಿಕ ಮಹತ್ವವನ್ನು ಹೊಂದಿದೆ. ವರ್ಷವಿಡೀ ವಿಶ್ವಾದ್ಯಂತ ಭಕ್ತರನ್ನು ಆಕರ್ಷಿಸುತ್ತದೆ.

ಗುಜರಾತ್ ಟೈಟಾನ್ಸ್ ನಿಂದ ಮುಂಬೈ ಇಂಡಿಯನ್ಸ್ ತಂಡಕ್ಕೆ ಬಂದ ಹಾರ್ದಿಕ್ ಪಾಂಡ್ಯಗೆ ಮುಂಬೈ ನಾಯಕತ್ವ ನೀಡಲಾಗಿದೆ. ರೋಹಿತ್ ಅವರನ್ನು ನಾಯಕತ್ವದಿಂದ ಕೆಳಕ್ಕಿಳಿಸಿದ ಬಳಿಕ ಅಭಿಮಾನಿಗಳು ಹಾರ್ದಿಕ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಪ್ರತಿ ಪಂದ್ಯದಲ್ಲಿ ಅಭಿಮಾನಿಗಳು ಹಾರ್ದಿಕ್ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ತವರು ಮೈದಾನ ವಾಂಖೆಡೆಯಲ್ಲೂ ಹಾರ್ದಿಕ್ ಅಭಿಮಾನಿಗಳ ನಿಂದನೆ ಎದುರಿಸಿದ್ದರು.

ಮುಂಬೈ ಇಂಡಿಯನ್ಸ್ ತಂಡವು ಆಡಿದ ಮೂರು ಪಂದ್ಯಗಳನ್ನೂ ಸೋತಿದೆ. ಅಂಕಪಟ್ಟಿಯಲ್ಲಿ ಮುಂಬೈ ಕೊನೆಯ ಸ್ಥಾನದಲ್ಲಿದೆ. ಮುಂದಿನ ಪಂದ್ಯದಲ್ಲಿ ಹಾರ್ದಿಕ್ ಪಡೆ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ರವಿವಾರ (ಎ.7) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next