Advertisement

Team India; ವಿಶ್ವಕಪ್ ನಿಂದಲೇ ಹೊರಬಿದ್ದ ಹಾರ್ದಿಕ್ ಪಾಂಡ್ಯ; ಬದಲಿಯಾಗಿ ಕನ್ನಡಿಗನ ಆಯ್ಕೆ

10:30 AM Nov 04, 2023 | Team Udayavani |

ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ಕೂಟದಲ್ಲಿ ಸತತ ಪಂದ್ಯಗಳನ್ನು ಗೆದ್ದು ಮುಂದಿನ ದಕ್ಷಿಣ ಆಫ್ರಿಕಾ ವಿರುದ್ಧ ಪ್ರಮುಖ ಪಂದ್ಯಕ್ಕೆ ಸಿದ್ದತೆ ನಡೆಸುತ್ತಿರುವ ಭಾರತ ತಂಡಕ್ಕೆ ಇದೀಗ ಆಘಾತ ಎದುರಾಗಿದೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದ ಹಾರ್ದಿಕ್ ಪಾಂಡ್ಯ ಇದೀಗ ಸಂಪೂರ್ಣ ಕೂಟದಿಂದಲೇ ಹೊರಬಿದ್ದಿದ್ದಾರೆ. ಉಪ ನಾಯಕನ ಎದುರು ನೋಡುತ್ತಿದ್ದ ತಂಡ ಇದೀಗ ಪರ್ಯಾಯ ವ್ಯವಸ್ಥೆ ಮಾಡಿದೆ.

Advertisement

ಕೂಟದಿಂದ ಹೊರಬಿದ್ದ ಹಾರ್ದಿಕ್ ಪಾಂಡ್ಯ ಬದಲಿಗೆ ಕನ್ನಡಿಗ ಪ್ರಸಿಧ್ ಕೃಷ್ಣ ಅವರು ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಪುಣೆಯಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಎಡ ಹಿಮ್ಮಡಿಗೆ ಗಾಯ ಮಾಡಿಕೊಂಡಿದ್ದರು. ಉಪನಾಯಕನಾಗಿದ್ದ ಪಾಂಡ್ಯ ಅವರನ್ನು ಆರಂಭದಲ್ಲಿ ಪುಣೆಯ ಆಸ್ಪತ್ರೆಗೆ ತಪಾಸಣೆಗಾಗಿ ಕರೆದೊಯ್ಯಲಾಯಿತು. ಆರಂಭದಲ್ಲಿ ಗಾಯವು ಭಯಪಡುವಷ್ಟು ತೀವ್ರವಾಗಿಲ್ಲ ಎಂದು ವರದಿಯಾಗಿತ್ತು. ಒಂದೆರಡು ವಾರಗಳ ವಿಶ್ರಾಂತಿಯ ಬಳಿಕ ಅವರು ತಂಡಕ್ಕೆ ಮರಳಲಿದ್ದಾರೆ ಎನ್ನಲಾಗಿತ್ತು. ಆದರೆ ಪಾಂಡ್ಯ ಚೇತರಿಕೆ ಕಾಣದ ಕಾರಣ ಅವರು ವಿಶ್ವಕಪ್ ಕೂಟದಿಂದಲೇ ಹೊರಬೀಳಬೇಕಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next