Advertisement

ರಾಹುಲ್‌ ದ್ರಾವಿಡ್‌ ಗರಡಿಯಲ್ಲಿ ಹಾರ್ದಿಕ್‌ ಪಾಂಡ್ಯ ತರಬೇತಿ ಶುರು

12:57 PM Jan 21, 2020 | keerthan |

ಬೆಂಗಳೂರು: ಗಾಯಗೊಂಡಿರುವ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ (ಎನ್‌ಸಿಎ)ಯಲ್ಲಿ ಕ್ರಿಕೆಟ್‌ ದಿಗ್ಗಜ ರಾಹುಲ್‌ ದ್ರಾವಿಡ್‌ ನಿರ್ದೇಶನದಲ್ಲಿ ಪುನಶ್ಚೇತನ ಶಿಬಿರದಲ್ಲಿ ತರಬೇತಿ ಆರಂಭಿಸಿದ್ದಾರೆ.

Advertisement

ಈಗಾಗಲೇ ಹಾರ್ದಿಕ್‌ ಪಾಂಡ್ಯ ಮುಂದಿನ 20 ದಿನಗಳ ಪುನಶ್ಚೇತನ ಶಿಬಿರವನ್ನು ಎನ್‌ಸಿಎ ನಲ್ಲೇ ಪೂರ್ಣಗೊಳಿಸುವುದಾಗಿ ಪ್ರಕಟಿಸಿದ್ದಾರೆ ಎಂದು ಎನ್‌ಸಿಎ ಮೂಲಗಳು ತಿಳಿಸಿವೆ.

ಆಸೀಸ್‌ ವಿರುದ್ಧ ಭಾರತ ಮುಂಬೈನಲ್ಲಿ ಮೊದಲ ಏಕದಿನ ಪಂದ್ಯ ಆಡುವುದಕ್ಕೂ ಮುನ್ನ ಹಾರ್ದಿಕ್‌ ಪಾಂಡ್ಯ ಭಾರತ ತಂಡದೊಂದಿಗೆ ಅಭ್ಯಾಸ ನಡೆಸಿದ್ದನ್ನು ಸ್ಮರಿಸಬಹುದು. ಸದ್ಯ ನ್ಯೂಜಿಲೆಂಡ್‌ ಸರಣಿಯ ಏಕದಿನ ಪಂದ್ಯಕ್ಕೆ ಹಾರ್ದಿಕ್‌ ಪಾಂಡ್ಯ ಲಭ್ಯವಾಗುವ ಸಾಧ್ಯತೆ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಅವರು ಅಷ್ಟರೊಳಗಾಗಿ ಚೇತರಿಸುವುದು ಕಷ್ಟ ಎಂದು ಹೇಳಲಾಗುತ್ತಿದೆ.

ಕಿವೀಸ್‌ ಸರಣಿಯ ಬಳಿಕ ಮಾರ್ಚ್‌ನಲ್ಲಿ ಆಫ್ರಿಕಾ ವಿರುದ್ಧ ಸರಣಿ ಇದ್ದು ಆ ವೇಳೆಗೆ ಪಾಂಡ್ಯ ಸಂಪೂರ್ಣ ಫಿಟ್‌ ಆಗುವ ನಿರೀಕ್ಷೆ ಇದೆ

Advertisement

Udayavani is now on Telegram. Click here to join our channel and stay updated with the latest news.

Next