Advertisement

ಹರಿಹರದಲ್ಲಿ ಹರ ಜಾತ್ರೆ ಮಹೋತ್ಸವ

12:27 PM Jan 11, 2020 | Naveen |

ಹರಿಹರ: ನಗರ ಹೊರವಲಯದ ವೀರಶೈವ ಲಿಂಗಾಯಿತ ಪಂಚಮಸಾಲಿ ಪೀಠದಲ್ಲಿ ಜ.14 ಮತ್ತು 15ರಂದು ಹರ ಜಾತ್ರಾ ಮಹೋತ್ಸವ, ಪಂಚಮಸಾಲಿ ರಾಜ್ಯ ಸಂಘದ ಬೆಳ್ಳಿಬೆಡಗು, ಅಕ್ಕಮಹಾದೇವಿ ವಚನ ವಿಜಯೋತ್ಸವ ಹಾಗೂ ತಮ್ಮ ಪೀಠಾರೋಹಣದ ದ್ವಿತೀಯ ವರ್ಷಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ವಚನಾನಂದ ಶ್ರೀಗಳು ಹೇಳಿದರು.

Advertisement

ಪೀಠದ ಆವರಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿ ಮಾತನಾಡಿದ ಅವರು, ಜ.14ರ ಬೆಳಿಗ್ಗೆ 11-30ಕ್ಕೆ ವೀರರಾಣಿ ಕಿತ್ತೂರು ಚನ್ನಪ್ಪ ವೇದಿಕೆಯಲ್ಲಿ ಹರಜಾತ್ರಾ ಮಹೋತ್ಸವ ಹಾಗೂ ಯುವ ಸಮಾವೇಶಕ್ಕೆ ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಚಾಲನೆ ನೀಡುವರು.

ಬೆಂಗಳೂರು ಆರ್ಟ್‌ ಆಫ್‌ ಲಿವಿಂಗ್‌ನ ರವಿಶಂಕರ್‌ ಗುರೂಜಿ ಸಾನ್ನಿಧ್ಯ ವಹಿಸುವರು. ಯುವ ಸಮಾವೇಶವನ್ನು ಮಾಜಿ ಸಚಿವ ಮುರುಗೇಶ್‌ ನಿರಾಣೆ ಉದ್ಘಾಟಿಸುವರು. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ಜಿ ದಿಕ್ಸೂಚಿ ಭಾಷಣ ಮಾಡುವರು, ಪಂಚಮಸಾಲಿ ರಾಜ್ಯ ಯುವಘಟಕದ ಅಧ್ಯಕ್ಷ ನವೀನ್‌ ಪಾಟೀಲ್‌ ಅಧ್ಯಕ್ಷತೆ ವಹಿಸುವರು. ಧರ್ಮದರ್ಶಿ ಚಂದ್ರಶೇಖರ ಪೂಜಾರ್‌ ಪ್ರಾಸ್ತಾವಿಕ ನುಡಿಗಳನ್ನಾಡುವರು.

ಮಧ್ಯಾಹ್ನ 2ಕ್ಕೆ ಸನ್ಮಾನ ಸಮಾರಂಭ, 2-30ಕ್ಕೆ ಪಂಚಮಸಾಲಿ ರಾಜ್ಯ ಸಂಘದ ಬೆಳ್ಳಿಬೆಡಗು ಸಮಾರಂಭವನ್ನು ಸಿಎಂ ಬಿ.ಎಸ್‌.ಯಡಿಯೂರಪ್ಪ ಉದ್ಘಾಟಿಸುವರು, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಶ್ರೀ, ನಿಡಸೋಸಿ ಸಿದ್ದಸಂಸ್ಥಾನ ಮಠದ ಪಂಚಮ ಶಿವಲಿಂಗೇಶ್ವರ ಶ್ರೀ ಸಾನ್ನಿಧ್ಯ ವಹಿಸುವರು. ರಾಜ್ಯ ಪಂಚಮಸಾಲಿ ಸಂಘದ ಅಧ್ಯಕ್ಷ ಬಿ.ನಾಗನಗೌಡರು ಅಧ್ಯಕ್ಷತೆ ವಹಿಸುವರು. ಜ.15ರ ಬೆಳಿಗ್ಗೆ 7-30ಕ್ಕೆ ಇಳಕಲ್‌ ಚಿತ್ತರಗಿ ಸಂಸ್ಥಾನಮಠದ ಗುರುಮಹಾಂತ ಮಹಾಶಿವಯೋಗಗಳು ಇಷ್ಟಲಿಂಗ ಪೂಜಾ ಪ್ರಾತ್ಯಕ್ಷತೆ ನಡೆಸುವರು, ಚಿತ್ರದುರ್ಗ ವನಶ್ರಿಮಠದ ಬಸವಕುಮಾರ ಶ್ರೀ, ಮಡಿವಾಳ ಗುರುಪೀಠದ ಬಸವ
ಮಾಚಿದೇವ ಶ್ರೀ ಮತ್ತಿತರೆ ವಿವಿಧ ಸಮಾಜಗಳ ಶ್ರೀಗಳು ಭಾಗವಹಿಸವರು. ಬೆಳಿಗ್ಗೆ 8-30ಕ್ಕೆ ಅಕ್ಕಮಹಾದೇವಿ ವಚನ ವಿಜಯೋತ್ಸವವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿಕಲಾ ಜೊಲ್ಲೆ ಉದ್ಘಾಟಿಸುವರು. ಸಂಕ್ರಾಂತಿ ಸಂಭ್ರಮ, ಕುಂಭಮೇಳ ಹಾಗೂ ಜಾನಪದ ಕಲಾಮೇಳದಲ್ಲಿ ಅಕ್ಕಮಹಾದೇವಿಯ ವಚನ ಕಟ್ಟುಗಳನ್ನು ಆನೆ ಅಂಬಾರಿಯಲ್ಲಿಸಿರಿ ಹರಿಹರೇಶ್ವರ ದೇವಸ್ಥಾನದಿಂದ ಶ್ರೀಕಾಂತ ಚಿತ್ರಮಂದಿರದವರೆಗೆ ಮೆರವಣಿಗೆ ನಡೆಸಲಾಗುವುದು.

ಮಧ್ಯಾಹ್ನ 11ಕ್ಕೆ ಬೆಳವಡಿ ಮಲ್ಲಮ್ಮ ವೇದಿಕೆಯಲ್ಲಿ ನಡೆವ ಮಹಳಾ ಸಮಾವೇಶವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಉದ್ಘಾಟಿಸುವರು, ಸಿರಿಗೆರೆ ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಶ್ರೀ, ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಶ್ರೀ, ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಶ್ರೀ, ಯೋಗಿ ವೇಮನ ಮಠದ ವೇಮನಾನಂದ ಶ್ರೀ, ಬಸವ ಸೇವಾ ಪ್ರತಿಷ್ಠಾನದ ಅಕ್ಕ ಅನ್ನಪೂರ್ಣ ಸಾನ್ನಿಧ್ಯ ವಹಿಸುವರು.

Advertisement

ಮಧ್ಯಾಹ್ನ 3ಕ್ಕೆ ಪೀಠದ ದಶಮಾನೋತ್ಸವ ಹಾಗೂ ತಮ್ಮ ದ್ವಿತೀಯ ಪೀಠಾರೋಹಣ ಸಮಾರಂಭವನ್ನು ಮಾಜಿ ಸಚಿವ ಡಿ.ಕೆ.ಶಿವಕುಮಾರ ಉದ್ಘಾಟಿಸುವರು. ಧರ್ಮದರ್ಶಿ ಬಿ.ಸಿ.ಉಮಾಪತಿ ಅಧ್ಯಕ್ಷತೆ ವಹಿಸುವರು ಎಂದು ವಿವರಿಸಿದರು.

ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ. ಪಾಟೀಲ್‌ ಮಾತನಾಡಿ, ಶ್ರೀಪೀಠ ಆರಂಭದಿಂದಲೂ ಸಮಾಜದ ಜನರ ನೋವುಗಳಿಗೆ ಸ್ಪಂದಿಸುತ್ತಿದೆ. ಶ್ರೀಗಳು ಪೀಠಾಧಿಪತಿಯಾಗಿ ಕೇವಲ 20 ತಿಂಗಳಲ್ಲೆ ಅಭುತಪೂರ್ವ ಕಾರ್ಯ ನಿರ್ವಹಿಸಿದ್ದಾರೆ. ಪೀಠಕ್ಕೆ ಆಗಮಿಸಿದ ಬಳಿಕ 400ಕ್ಕೂ ಹೆಚ್ಚು ವಿದೇಶಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ,
ವಿದೇಶಗಳಲ್ಲೂ ಪೀಠದ ಕೀರ್ತಿ ಮೊಳಗಿಸಿದ್ದಾರೆ. ಬೆಳ್ಳಿ ಬೆಡಗು ಹಾಗೂ ಪ್ರಥಮ ಬಾರಿಗೆ ಆಯೋಜಿಸಿರುವ ಹರ ಜಾತ್ರಾ ಮಹೋತ್ಸವದಲ್ಲಿ ಹಲವು ವಿನೂತನ ಯೋಜನೆ ಆರಂಭಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ 3 ಲಕ್ಷಕ್ಕೂ ಅಧಿಕ ಜನ ಭಾಗವಹಿಸಲಿದ್ದು, ಲಕ್ಷಾಂತರ ಜನರಿಗೆ ಆಸನ, ಊಟ, ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ಶುದ್ದ ಕುಡಿವ ನೀರು, ಮಜ್ಜಿಗೆ ವಿತರಣೆಯಿದೆ. ನಗರದ ಎಲ್ಲಾ ಕಲ್ಯಾಣ ಮಂಟಪಗಳಲ್ಲಿ ಜನರಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ. 8 ಎಲ್‌ಇಡಿ ವಾಲ್‌, ಪೊಲೀಸ್‌ ಇಲಾಖೆಯ
ಸಹಕಾರದೊಂದಿಗೆ ಮಠದ ಸುತ್ತಮುತ್ತಲ ಖಾಲಿ ಜಾಗಗಳಲ್ಲಿ ಸುಸಜ್ಜಿತ ವಾಹನ ನಿಲ್ದಾಣ ನಿರ್ಮಿಸಲಾಗಿದೆ. ಸುರಕ್ಷತೆ ದೃಷ್ಟಿಯಿಂದ 100ಕ್ಕೂ ಅಧಿಕ ಸಿಸಿಟಿವಿ ಅಳವಡಿಸಲಾಗುವುದು. ಆಂಬ್ಯುಲೆನ್ಸ್‌, ಬೆಂಕಿ ನಂದಿಸುವ ವಾಹನಗಳ ಸಜ್ಜುಗೊಳಸಲಾಗಿದೆ. ನಿರಂತರ ವಿದ್ಯುತ್‌ಗಾಗಿ ಪ್ರತ್ಯೇಕ ವಿದ್ಯುತ್‌ ಮಾರ್ಗ, ಪರಿವರ್ತಕ ಅಳವಡಿಸಲಾಗುತ್ತಿದೆ. ಮಾಧ್ಯಮದವರಿಗೆ ಮೀಡಿಯಾ ಸೆಂಟರ್‌ ತೆರೆಯಲಾಗುತ್ತಿದೆ. ಜಾತ್ರಾ ಮಹೋತ್ಸವ
ಸಮಿತಿ ಅಧ್ಯಕ್ಷ ಸಿ.ಆರ್‌. ಬಳ್ಳಾರಿ, ಧರ್ಮದರ್ಶಿಗಳಾದ ಬಿ.ಸಿ.ಉಮಾಪತಿ, ಚಂದ್ರಶೇಖರ ಪೂಜಾರ್‌, ಕರಿಬಸಪ್ಪ ಗುತ್ತೂರು ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next