Advertisement

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

05:38 PM Apr 23, 2024 | Team Udayavani |

ದಾವಣಗೆರೆ: ಅಕ್ರಮ ಮರಳುಗಾರಿಕೆ ಬಗ್ಗೆ ಮಾಧ್ಯಮಗಳಿಗೆ, ಅಧಿಕಾರಿಗಳಿಗೆ ಮಾಹಿತಿ ನೀಡಿದ ಕಾರಣಕ್ಕೆ ಹರಿಹರ ಶಾಸಕರಿಗೆ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಬಗ್ಗೆ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರು ಪೊಲೀಸ್ ದೂರು ನೀಡಿದ್ದಾರೆ.

Advertisement

ಹರಿಹರ ಹಾಗೂ ಹರಪನಹಳ್ಳಿ ತಾಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಬಗ್ಗೆ ಮಾಧ್ಯಮಗಳಿಗೆ, ಅಧಿಕಾರಿಗಳಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಜೀವ ಬೆದರಿಕೆ ಹಾಕಲಾಗಿದೆ ಎಂದಿದ್ದಾರೆ.

ಕ್ರಷರ್ ನ ಮಾಲಿಕರ ಸಹೋದರ ಮಂಜುನಾಥ್ ಅಮರಾವತಿ ಎಂಬವರು ಜೀವ ಬೆದರಿಕೆ ಹಾಕಿದ್ದು, ‘ಯಾವ ಧೈರ್ಯದಿಂದ ಹರಿಹರಕ್ಕೆ ಬರುತ್ತೀಯಾ, ಯಾವುದೇ ಕಾರಣಕ್ಕೂ ನಿನ್ನನ್ನು ಉಳಿಸಲ್ಲ’ ಎಂದು ಬೆದರಿಕೆಯೊಡ್ಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ನೀಢಿದ ದೂರಿನಲ್ಲಿ ಶಾಸಕ ಬಿ.ಪಿ ಹರೀಶ್ ಹೇಳಿದ್ದಾರೆ.

ಮಂಜುನಾಥ್ ಅಮರಾವತಿ ಬಂಧನಕ್ಕೆ ಆಗ್ರಹಿಸಿದ್ದು, ಬೆದರಿಕೆ ಹಿನ್ನೆಲೆಯಲ್ಲಿ ರಕ್ಷಣೆ ಕೋರಿ ಶಾಸಕರು ಎಸ್ಪಿಗೆ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next