Advertisement
ಶನಿವಾರ ತಾಲೂಕಿನ ಸಾರಥಿ-ಚಿಕ್ಕಬಿದರಿ ಗ್ರಾಮಗಳ ನಡುವಿನ ಜಲಾವೃತಗೊಂಡ ಸೇತುವೆ ವೀಕ್ಷಿಸಲು ಆಗಮಿಸಿದ್ದ ಸಂಸದ ಜಿ.ಎಂ.ಸಿದ್ದೇಶ್ವರ್ ಹಾಗೂ ಡಿಸಿ ಜಿ.ಎಸ್.ಶಿವಮೂರ್ತಿ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಪರಿ ಇದು.
Related Articles
Advertisement
ನಂತರ ನಗರದ ಗಂಗಾನಗರಕ್ಕೆ ಆಗಮಿಸಿದ ಅವರು, ಇಲ್ಲಿನ ಸಂತ್ರಸ್ತರನ್ನು ಗಂಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಇವರಿಗೆ 10 ಎಕರೆ ಜಾಗದಲ್ಲಿ ವಸತಿ ವ್ಯವಸ್ಥೆ ಮಾಡಲು ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ. ಈಗಾಗಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿದ್ದು, ಕೇಂದ್ರ ಸರಕಾರ 126 ಕೋಟಿ ರೂ. ಬಿಡುಗಡೆ ಮಾಡಿದೆ. ರಾಜ್ಯ ಸರಕಾರ 100 ಕೋಟಿ ರೂ. ಬಿಡುಗಡೆ ಮಾಡಲಿದೆ ಎಂದರು.
ಭದ್ರಾ ಡ್ಯಾಂನಿಂದಲೂ ನದಿಗೆ ನೀರು ಬಿಡಲಾಗಿದೆ. ನದಿ ಪ್ರವಾಹ ಮತ್ತಷ್ಟು ಹೆಚ್ಚಾಗಲಿದೆ. ತಗ್ಗು ಪ್ರದೇಶದ ವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಸೂಚಿಸಿದರು. ನಷ್ಟಕ್ಕೀಡಾದ ರೈತರಿಗೆ ರಾಜ್ಯ, ಕೇಂದ್ರ ಸರಕಾರದಿಂದ ಸೂಕ್ತ ಪರಿಹಾರ ದೊರಕಿಸಲಾಗುವುದು ಎಂದು ಭರವಸೆ ನೀಡಿದರು.
ನಂತರ ಎಪಿಎಂಸಿ ಆವರಣದ ಗಂಜಿ ಕೇಂದ್ರಕ್ಕೆ ಸಿದ್ದೇಶ್ವರ್ ಭೇಟಿ ನೀಡಿ, ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದರು. ಮಾಜಿ ಶಾಸಕ ಬಿ.ಪಿ.ಹರೀಶ್, ಡಿಸಿ ಜಿ.ಎಸ್.ಶಿವಮೂರ್ತಿ, ಎಸಿ ಬಿ.ಟಿ.ಕುಮಾರಸ್ವಾಮಿ, ತಹಸೀಲ್ದಾರ್ ರೆಹಾನ್ ಪಾಷಾ, ಜಿಪಂ ಮಾಜಿ ಅಧ್ಯಕ್ಷ ಎಸ್.ಎಂ.ವೀರೇಶ್, ತಾಪಂ ಮಾಜಿ ಅಧ್ಯಕ್ಷ ಐರಣಿ ಅಣ್ಣೇಶ್, ಚಂದ್ರಶೇಖರ್ ಪೂಜಾರಿ ಇತರರಿದ್ದರು.