Advertisement

ಮೋದಿಯವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಸಾದ ಹಸ್ತಾಂತರಿಸಿದ ಹರೀಶ್‌ ಪೂಂಜ

07:46 PM May 04, 2023 | Team Udayavani |

ಮೂಲ್ಕಿ: ಮೂಲ್ಕಿಯಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಂಡ ನವಕರ್ನಾಟಕ ಸಂಕಲ್ಪ ಸಮಾವೇಶದ ಸಂದರ್ಭ ಮೋದಿಯವರಿಗೆ ಬೆಳ್ತಂಗಡಿ ಶಾಸಕ, ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಅನುಗ್ರಹ ಪ್ರಸಾದವನ್ನು ನೀಡಿದರು.

Advertisement

ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆಯವರು ಕಳುಹಿಸಿಕೊಟ್ಟ ಶಾಲು, ಮಾಲೆ ಹಾಕಿ ಗೌರವಿಸಿದರು.

ಸಮಾವೇಶದಲ್ಲಿ ಮಾತನಾಡಿದ ಹರೀಶ್‌ ಪೂಂಜ ಅವರು, ಕಳೆದ ಐದು ವರ್ಷದ ಹಿಂದೆ ಬೆಳ್ತಂಗಡಿಯಲ್ಲಿ ಪಕ್ಷವು ನನ್ನಂತಹ ಯುವಕನಿಗೆ ಸ್ಪರ್ಧಿಸಲು ಅವಕಾಶ ಕೊಟ್ಟು ನನ್ನ ಮೇಲೆ ವಿಶ್ವಾಸ ಇರಿಸಿ, ಶಾಸಕನನ್ನಾಗಿ ಮಾಡಿ ಹರಸಿದರು, ಅಂದಿನ ವಿಶ್ವಾಸವನ್ನು ಐದು ವರ್ಷ ಕಾಲವೂ ಉಳಿಸಿ ರಾಜ್ಯದಲ್ಲೇ ಬೆಳ್ತಂಗಡಿಯನ್ನು ಗುರುತಿಸುವಂತಹ ಅಭಿವೃದ್ಧಿ ಕೆಲಸ ಮಾಡಿದ್ದೇನೆ, ಮುಂದಿನ ಐದು ವರ್ಷ ಬೆಳ್ತಂಗಡಿಯನ್ನು ದೇಶವೇ ಗುರುತಿಸುವ ರೀತಿಯಲ್ಲಿ ಕೆಲಸ ಮಾಡುವೆ ಎಂದು ನುಡಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next