Advertisement

ಉಪಸಭಾಪತಿ: ಬಿ.ಕೆ. ಹರಿಪ್ರಸಾದ್‌ ವಿಪಕ್ಷಗಳ ಅಭ್ಯರ್ಥಿ

06:00 AM Aug 09, 2018 | |

ಹೊಸದಿಲ್ಲಿ: ರಾಜ್ಯಸಭೆಯ ಉಪ ಸಭಾಪತಿ ಸ್ಥಾನಕ್ಕೆ ಕನ್ನಡಿಗ, ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್‌ (64) ಮತ್ತು ಜೆಡಿಯುನ ಹರಿವಂಶ್‌ ನಾರಾಯಣ್‌ ಸಿಂಗ್‌ (62) ನಡುವೆ ಸ್ಪರ್ಧೆ ಏರ್ಪಟ್ಟಿದೆ. ಗುರುವಾರ ಚುನಾವಣೆ ನಡೆಯಲಿದ್ದು, ಎನ್‌ಡಿಎ ಪರ ಹರಿವಂಶ್‌ ನಾರಾಯಣ್‌ ಸಿಂಗ್‌ ಮತ್ತು ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಕಾಂಗ್ರೆಸ್‌ನ ಹರಿಪ್ರಸಾದ್‌ ಬುಧವಾರ ನಾಮ ಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಯದೆ ಎನ್‌ಡಿಎಯಿಂದ ಹರಿವಂಶ್‌ ಹೆಸರು ಘೋಷಣೆಯಾಗುತ್ತಿದ್ದಂತೆ, ವಿಪಕ್ಷಗಳ ಪಾಳಯದಲ್ಲಿ ರಾಜಕೀಯ ಲೆಕ್ಕಾಚಾರವೇ ಬದಲಾಯಿತು. ಪ್ರಾದೇಶಿಕ ಪಕ್ಷಗಳು ಹಿಂದೆ ಸರಿದು ಕಾಂಗ್ರೆಸ್‌ ಅಭ್ಯರ್ಥಿಗೆ ಬೆಂಬಲ ನೀಡುವುದಾಗಿ ಘೋಷಿಸಿದವು.

Advertisement

ಎನ್‌ಡಿಎ ಅಭ್ಯರ್ಥಿ ಪರ ಶಿವಸೇನೆ ಮತ್ತು ಅಕಾಲಿ ದಳ ಮತ ಹಾಕುವುದಾಗಿ ಘೋಷಣೆ ಮಾಡಿವೆ. ಕಾಂಗ್ರೆಸ್‌ನ ವಿರೋಧಿಯಾಗಿರುವ, 6 ಸದಸ್ಯ ಬಲ ಹೊಂದಿರುವ ಟಿಆರ್‌ಎಸ್‌ ಕೂಡ ಎನ್‌ಡಿಎ ಬೆಂಬಲಿಸುವ ಸಾಧ್ಯತೆಯಿದೆ. ಬಿಜು ಜನತಾ ದಳ ನಾಯಕ, ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರಿಗೆ ಪ್ರಧಾನಿ ಮೋದಿ, ನಿತೀಶ್‌ ಕುಮಾರ್‌ ಕರೆ ಮಾಡಿ ಬೆಂಬಲ ನೀಡುವಂತೆ ಕೋರಿದ್ದಾರೆ. 9 ಸಂಸದರನ್ನು ಹೊಂದಿರುವ ಬಿಜೆಡಿ ನಿರ್ಣಾಯಕವಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಆಡಳಿತ, ವಿಪಕ್ಷಗಳ ನಾಯಕರು ತಮ್ಮ ತಮ್ಮ ಸದಸ್ಯರಿಗೆ ವಿಪ್‌ ನೀಡಿವೆ.

Advertisement

Udayavani is now on Telegram. Click here to join our channel and stay updated with the latest news.

Next