Advertisement

ಇತಿಹಾಸ ಬರೆದ ಸಾಮರಸ್ಯ ಯಾತ್ರೆ

10:49 PM Dec 29, 2019 | Team Udayavani |

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ ಮೂಡಿಸುವ ನಿಟ್ಟಿನಲ್ಲಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಮಾಡಿರುವ ಪ್ರಯತ್ನ ಸರ್ವಕಾಲಕ್ಕೂ ಮಾದರಿ. ಅದರಲ್ಲೂ ಐತಿಹಾಸಿಕ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿದ್ದ ಅಸ್ಪೃಶ್ಯತೆ ನಿವಾರಿಸುವ ನಿಟ್ಟಿನಲ್ಲಿ ಶ್ರೀಗಳು ಕೈಗೊಂಡ ಪಾದಯಾತ್ರೆ ಹೊಸ ಇತಿಹಾಸವನ್ನೇ ಬರೆದಿದೆ.

Advertisement

ಚಿತ್ರದುರ್ಗ ಜಿಲ್ಲೆಯ ವಿವಿಧೆಡೆ ಸಾಕಷ್ಟು ಬಾರಿ ಭೇಟಿ ನೀಡಿದ್ದ ಪೇಜಾವರ ಶ್ರೀಗಳು, ದಲಿತ ಕೇರಿಗಳಲ್ಲಿ ಸಾಮರಸ್ಯ ಪಾದಯಾತ್ರೆ ನಡೆಸಿ ದಲಿತರಲ್ಲಿ ಆತ್ಮಸ್ಥೈರ್ಯ ಮೂಡಿಸಿದ್ದರು. ಜಿಲ್ಲೆಯ ಎಲ್ಲ ಮಠಾಧೀಶರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಶ್ರೀಗಳು ಮಾದಾರ ಚನ್ನಯ್ಯ ಸ್ವಾಮೀಜಿಯವರೊಂದಿಗೆ ದಲಿತರು ಹಾಗೂ ಮೇಲ್ವರ್ಗದವರ ನಡುವೆ ಸ್ನೇಹಸೇತು ಬೆಸೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ತಾವು ದಲಿತ ಕೇರಿಗೆ ಹೋದಂತೆ ಮೈಸೂರಿನ ಕೃಷ್ಣಮೂರ್ತಿಪುರಂನ ಬ್ರಾಹ್ಮಣರ ಅಗ್ರಹಾರದಲ್ಲಿ ಮಾದಾರ ಚನ್ನಯ್ಯ ಶ್ರೀಗಳ ಪಾದಯಾತ್ರೆ ಏರ್ಪಡಿಸಿ ಯಶಸ್ವಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next