Advertisement

ಐಎಂಎ ಸಕ್ಷಮ ಪ್ರಾಧಿಕಾರಕ್ಕೆ ಹರ್ಷ ಗುಪ್ತ ಮುಖ್ಯಸ್ಥ

10:48 PM Jan 14, 2020 | Lakshmi GovindaRaj |

ಬೆಂಗಳೂರು: ಬಹುಕೋಟಿ ವಂಚನೆ ಐಎಂಎ ಪ್ರಕರಣದಲ್ಲಿ ಆಸ್ತಿ ಮುಟ್ಟುಗೋಲು, ಚಿನ್ನಾಭರಣ ಜಪ್ತಿ ಸೇರಿ ಇತರೆ ಪ್ರಕ್ರಿಯೆಗಳಿಗೆ ಹೊಸದಾಗಿ ರಚಿಸಲಾಗಿರುವ ಸಕ್ಷಮ ಪ್ರಾಧಿಕಾರದ ಮುಖ್ಯಸ್ಥರನ್ನಾಗಿ ಹಿರಿಯ ಐಎಎಸ್‌ ಅಧಿಕಾರಿ ಹರ್ಷ ಗುಪ್ತ ಅವರನ್ನು ನೇಮಿಸಲಾಗಿದೆ. ಬೆಂಗಳೂರು ವಲಯದ ವಿಭಾಗೀಯ ಆಯುಕ್ತರಾಗಿದ್ದ ಹರ್ಷ ಗುಪ್ತಾ ಅವರನ್ನು ಐಎಂಎ ಸಕ್ಷಮ ಪ್ರಾಧಿಕಾರದ ಮುಖ್ಯಸ್ಥ ಹುದ್ದೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Advertisement

ಇದೇ ವೇಳೆ ಹುದ್ದೆ ನಿರೀಕ್ಷೆಯಲ್ಲಿದ್ದ ಸಿ.ಟಿ.ಶಿಲ್ಪಾನಾಗ್‌ ಅವರನ್ನು ಮೈಸೂರಿನ ಅಬ್ದುಲ್‌ ನಜೀರ ಸಾಬ್‌ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಇನ್ಸ್‌ಟಿಟ್ಯೂಟ್‌ನ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ. ಜತೆಗೆ, ಆರ್‌ಡಿಪಿಆರ್‌ ಇ-ಗವರ್ನೆನ್ಸ್‌ ನಿರ್ದೇಶಕರಾಗಿಯೂ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next