Advertisement

ಶಬರಿಮಲೆಗೆ ಸ್ತ್ರೀ ಪ್ರವೇಶದ ಬಳಿಕ ಹಿಂಸಾಚಾರ; 1 ಬಲಿ, ಹರತಾಳ 

04:18 AM Jan 03, 2019 | |

ತಿರುವನಂತಪುರ: ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ಬುಧವಾರ ಬೆಳಗಿನ ಜಾವ ಇಬ್ಬರು ಮಹಿಳೆಯರು ಪ್ರವೇಶ ಮಾಡಿದ ಬಳಿಕ ಕೇರಳದೆಲ್ಲೆಡೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ವ್ಯಾಪಕ ಹಿಂಸಾಚಾರ ನಡೆದಿದ್ದು ಈಗಾಗಲೇ ಒಂದು ಬಲಿ ಪಡೆದಿದೆ. 

Advertisement

ಪಂದಾಲಂನಲ್ಲಿ ಸಿಪಿಐಎಂ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆ ವೇಳೆ ಕಲ್ಲು ತೂರಾಟದಲ್ಲಿ ಗಾಯಗೊಂಡಿದ್ದ 55 ವರ್ಷದ ಶಬರಿ ಮಲೆ ಕರ್ಮ ಸಮಿತಿಯ ಸದಸ್ಯರೊಬ್ಬರು ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. 

ಹಿಂಸಾಚಾರದ ಹಿನ್ನಲೆಯಲ್ಲಿ ಕರ್ನಾಟಕದಿಂದ ಕೇರಳಕ್ಕೆ ಸಂಚರಿಸಬೇಕಾಗಿದ್ದ ಎಲ್ಲಾ ಸರಕಾರಿ ಬಸ್‌ಗಳನ್ನು ಸ್ಥಗಿತಗೊಳಿಸಲಾಗಿದೆ.

ವಿವಿಧ ಕೇರಳ ವಿಶ್ವವಿದ್ಯಾಲಯಗಳು ಗುರುವಾರ ನಡೆಯಬೇಕಾಗಿದ್ದ ಪರೀಕ್ಷೆಗಳನ್ನು ಮುಂದೂಡಿವೆ.

ಶಬರಿ ಮಲೆ ಕರ್ಮ ಸಮಿತಿ ಕರೆ ನೀಡಿರುವ ರಾಜ್ಯ ಬಂದ್‌ಗೆ ಬಿಜೆಪಿ  ಸಂಪೂರ್ಣ ಬೆಂಬಲ ಸೂಚಸಿದ್ದು,ಕಾಂಗ್ರೆಸ್‌ ನೇತೃತ್ವದ ಯುಡಿಎಫ್ ಕರಾಳ ದಿನವನ್ನು ಆಚರಿಸುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next