Advertisement

Haryana: ಅ.17ರಂದು ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ, ಪ್ರಧಾನಿ ಉಪಸ್ಥಿತಿ

12:39 PM Oct 12, 2024 | Team Udayavani |

ಹರ್ಯಾಣ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಸತತ ಮೂರನೇ ಗೆಲುವಿನ ನಂತರ ಬಿಜೆಪಿ ಸರ್ಕಾರ ರಚನೆಗೆ ಸಜ್ಜಾಗಿದೆ. ಅದರಂತೆ ಹರ್ಯಾಣದ ನೂತನ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಅವರು ಅಕ್ಟೋಬರ್ 17 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ,
ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

Advertisement

ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಹೊಸ ಸರ್ಕಾರದ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದು. ಗುರುವಾರ (ಅ.17) ರಂದು ಪಂಚಕುಲದ ದಸರಾ ಮೈದಾನದಲ್ಲಿ ಬೆಳಗ್ಗೆ 10:00 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎನ್ನಲಾಗಿದೆ.

ಪ್ರಧಾನಿ ಮೋದಿ ಉಪಸ್ಥಿತಿ:
ಪ್ರಧಾನಿ ಮೋದಿ, ಬಿಜೆಪಿ ಆಡಳಿತವಿರುವ ಇತರ ರಾಜ್ಯಗಳ ಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರ ಜೊತೆಗೆ ಪಕ್ಷದ ಹಿರಿಯ ನಾಯಕರೂ ಸಮಾರಂಭದಲ್ಲಿ ಉಪಸ್ಥಿತರಿರುತ್ತಾರೆ. ಏತನ್ಮಧ್ಯೆ, ಪರೇಡ್ ಮೈದಾನದಲ್ಲಿ ಸಮಾರಂಭಕ್ಕೆ ಸಿದ್ಧತೆಗಳು ನಡೆಯುತ್ತಿವೆ. “ನಾವು ಕಾರ್ಯಕ್ರಮಕ್ಕಾಗಿ ಸ್ಥಳವನ್ನು ಸಿದ್ಧಪಡಿಸುತ್ತಿದ್ದೇವೆ” ಎಂದು ಪಂಚಕುಲದ ಉಪ ಆಯುಕ್ತ (ಡಿಸಿ) ಡಾ. ಯಶ್ ಗಾರ್ಗ್ ಟ್ವೀಟ್ ಮಾಡಿದ್ದಾರೆ.

ಪ್ರಮಾಣ ವಚನ ಸಮಾರಂಭಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಲು ಡಿಸಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿಯನ್ನೂ ರಚಿಸಲಾಗಿದೆ. ಬಿಜೆಪಿ ತನ್ನ ಚುನಾವಣಾ ಪ್ರಚಾರದ ಸಮಯದಲ್ಲಿ, ನಯಾಬ್ ಸಿಂಗ್ ಸೈನಿ ಅವರು ಮತ್ತೆ ಅಧಿಕಾರಕ್ಕೆ ಬಂದರೆ ಉನ್ನತ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಇದೀಗ ಹರಿಯಾಣದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಭಾರತೀಯ ಜನತಾ ಪಕ್ಷವು(ಬಿಜೆಪಿ) ತನ್ನ ಮೂರನೇ ಇನ್ನಿಂಗ್ಸ್‌ಗೆ ಸಿದ್ಧವಾಗಿದೆ. ಅದರಂತೆ ನಯಾಬ್ ಸಿಂಗ್ ಸೈನಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ: Assam: ಲುಂಗಿ, ಬೆಡ್ ಶೀಟ್ ಬಳಸಿ ಜೈಲಿನ 20 ಅಡಿ ಎತ್ತರದ ಗೋಡೆ ಜಿಗಿದು 5 ಕೈದಿಗಳು ಎಸ್ಕೇಪ್

Advertisement
Advertisement

Udayavani is now on Telegram. Click here to join our channel and stay updated with the latest news.

Next