Advertisement

Haryana ಶಂಭು ಗಡಿಯಲ್ಲಿ ರೈತರ ಮೇಲೆ ಪೊಲೀಸರಿಂದ ಅಶ್ರುವಾಯು ಪ್ರಯೋಗ

07:22 PM Feb 16, 2024 | Team Udayavani |

ಚಂಡೀಗಢ: ಕೇಂದ್ರ ಸಚಿವರು ಮತ್ತು ರೈತ ಮುಖಂಡರ ನಡುವಿನ ಮಾತುಕತೆ ಮುರಿದುಬಿದ್ದ ಒಂದು ದಿನದ ನಂತರ ಅಂಬಾಲಾ ಬಳಿಯ ಶಂಭು ಗಡಿಯಲ್ಲಿ ಬ್ಯಾರಿಕೇಡ್‌ಗಳತ್ತ ಸಾಗಿದಾಗ ಪ್ರತಿಭಟನಾ ನಿರತ ರೈತರನ್ನು ಚದುರಿಸಲು ಹರಿಯಾಣ ಪೊಲೀಸರು ಶುಕ್ರವಾರ ಅಶ್ರುವಾಯು ಪ್ರಯೋಗ ಮಾಡಿದ್ದಾರೆ.

Advertisement

ಬೆಳೆಗಳಿಗೆ ಬೆಂಬಲ ಬೆಲೆ (MSP), ಕನಿಷ್ಠ ಕಾನೂನಾತ್ಮಕ ಖಾತರಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಅಂಗೀಕರಿಸುವಂತೆ ಸರಕಾರವನ್ನು ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಕರೆ ನೀಡಿರುವ ರೈತರ ‘ದೆಹಲಿ ಚಲೋ’ ಮೆರವಣಿಗೆಯ ನಾಲ್ಕನೇ ದಿನದಂದು ಹೊಸ ಸಂಘರ್ಷ ನಡೆದಿದೆ.

ನಾಲ್ಕನೇ ಸುತ್ತಿನ ಮಾತುಕತೆಗಾಗಿ ಕೇಂದ್ರ ಸಚಿವರು ಮತ್ತು ರೈತ ಮುಖಂಡರು ಫೆಬ್ರವರಿ 18 ರಂದು ಸಭೆ ನಡೆಸಲಿದ್ದಾರೆ. ಫೆಬ್ರವರಿ 8, 12 ಮತ್ತು 15 ರಂದು ಎರಡೂ ಕಡೆಯವರು ನಡೆಸಿದ ಮಾತುಕತೆಗಳು ಫಲಪ್ರದವಾಗಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next