Advertisement

Haryana; ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಕ್ಯಾಪ್ಟನ್ ಅಜಯ್ ಯಾದವ್

07:41 PM Oct 17, 2024 | Team Udayavani |

ಚಂಡೀಗಢ : ಹರಿಯಾಣದಲ್ಲಿ ಆಘಾತಕಾರಿ ಸೋಲಿನ ಬೆನ್ನೆಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಶಾಕ್ ಎನ್ನುವಂತೆ ಹಿರಿಯ ನಾಯಕ ಕ್ಯಾಪ್ಟನ್ ಅಜಯ್ ಯಾದವ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಗುರುವಾರ(ಅ17) ರಾಜೀನಾಮೆ ನೀಡಿದ್ದಾರೆ.

Advertisement

ಎಐಸಿಸಿ ಒಬಿಸಿ ವಿಭಾಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಯಾದವ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿರುವುದಾಗಿ ಇನ್ಸ್ಟಾಗ್ರಾಮ್ ಪೋಸ್ಟ್ ಮೂಲಕ ಘೋಷಿಸಿದ್ದಾರೆ.

“ನನ್ನ ಕುಟುಂಬವು 70 ವರ್ಷಗಳಿಂದ ಕಾಂಗ್ರೆಸ್ ಪಕ್ಷದೊಂದಿಗೆ ಸಂಬಂಧ ಹೊಂದಿದ್ದರಿಂದ ರಾಜೀನಾಮೆ ನೀಡುವ ಈ ನಿರ್ಧಾರವು ನಿಜವಾಗಿಯೂ ಕಷ್ಟಕರ. ನನ್ನ ತಂದೆ ದಿವಂಗತ ರಾವ್ ಅಭಯ್ ಸಿಂಗ್ 1952 ರಲ್ಲಿ ಶಾಸಕರಾಗಿದ್ದರು. ನಾನು ಕುಟುಂಬದ ಸಂಪ್ರದಾಯವನ್ನು ಮುಂದುವರೆಸಿದೆ.ಸೋನಿಯಾ ಗಾಂಧಿ ಅವರು ರಾಜೀನಾಮೆ ನೀಡಿದ ನಂತರ ಪಕ್ಷದ ಹೈಕಮಾಂಡ್‌ನಿಂದ ನಾನು ಭ್ರಮನಿರಸನಗೊಂಡಿದ್ದೇನೆ ಎಂದು ಅವರು ಬರೆದು ಖರ್ಗೆ ಮತ್ತು ರಾಹುಲ್ ಗಾಂಧಿ ಇಬ್ಬರನ್ನೂ ಟ್ಯಾಗ್ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next