Advertisement

Haryana: ರೈತರಿಂದ ದೆಹಲಿ ಚಲೋ… ಪಂಜಾಬ್, ಹರಿಯಾಣ ಗಡಿ ಬಂದ್, ಮೊಬೈಲ್ ಇಂಟರ್ನೆಟ್ ಸ್ಥಗಿತ

11:01 AM Feb 11, 2024 | Team Udayavani |

ಪಂಜಾಬ್: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರಕ್ಕೆ ಒತ್ತಾಯಿಸಿ ಫೆ.13ರಂದು ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆ ನಡೆಸಲು ರೈತ ಸಂಘಗಳು ಯೋಜಿಸಿರುವ ಹಿನ್ನೆಲೆಯಲ್ಲಿ ದೆಹಲಿ-ಹರಿಯಾಣ ಗಡಿ, ಅಂಬಾಲಾ, ಜಿಂದ್‌ನಲ್ಲಿ ಪಂಜಾಬ್-ಹರಿಯಾಣ ಗಡಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

Advertisement

ಮುನ್ನೆಚ್ಚರಿಕಾ ಕ್ರಮವಾಗಿ ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಸೇರಿದಂತೆ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲು ಹರಿಯಾಣ ಸರ್ಕಾರ ಆದೇಶಿಸಿದೆ.

ಹಲವೆಡೆ ಸಂಚಾರ ನಿರ್ಬಂಧವನ್ನೂ ಮಾಡಲಾಗಿದೆ. ಏತನ್ಮಧ್ಯೆ, ಫೆಬ್ರವರಿ 12 ರಂದು ತಮ್ಮ ಬೇಡಿಕೆಗಳ ಕುರಿತು ಚರ್ಚಿಸಲು ಕೇಂದ್ರವು ಅವರನ್ನು ಸಭೆಗೆ ಆಹ್ವಾನಿಸಿದೆ.

ಸರಿಸುಮಾರು 200 ರೈತ ಸಂಘಗಳು ಫೆಬ್ರವರಿ 13 ರಂದು ಆಯೋಜಿಸಿರುವ ‘ದೆಹಲಿ ಚಲೋ’ ಮೆರವಣಿಗೆಗೆ ಮುಂಚಿತವಾಗಿ, ಹರಿಯಾಣ ಪೊಲೀಸರು ಟ್ರಾಫಿಕ್ ಸಲಹೆಯನ್ನು ನೀಡಿದ್ದು, ತೀರಾ ಅಗತ್ಯವಿಲ್ಲದಿದ್ದರೆ ರಾಜ್ಯದ ಪ್ರಮುಖ ರಸ್ತೆಗಳನ್ನು ತಪ್ಪಿಸುವಂತೆ ಜನರನ್ನು ಒತ್ತಾಯಿಸಿದ್ದಾರೆ. ಪ್ರತಿಭಟನೆಗೂ ಮುನ್ನ ಕಾನೂನು ಸುವ್ಯವಸ್ಥೆ ಕಾಪಾಡಲು ಪಂಚಕುಲದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

ರೈತರ ಮೆರವಣಿಗೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕೂಡ ಕಟ್ಟೆಚ್ಚರ ವಹಿಸಿದ್ದು, ದೆಹಲಿಯ ಎಲ್ಲಾ ಗಡಿಗಳಲ್ಲಿ ಬಿಗಿ ಭದ್ರತೆಯನ್ನು ನಿರ್ವಹಿಸಲಾಗುತ್ತಿದೆ.

Advertisement

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತ್ರಿಪಡಿಸುವ ಕಾನೂನನ್ನು ಜಾರಿಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸೇರಿದಂತೆ ರೈತ ಗುಂಪುಗಳು ಮೆರವಣಿಗೆಗೆ ಕರೆ ನೀಡಿವೆ.

ಹರಿಯಾಣ ಮತ್ತು ಪಂಜಾಬ್‌ನ ರೈತರು ದೆಹಲಿ ಗಡಿಯನ್ನು ತಲುಪದಂತೆ ತಡೆಯಲು ದೆಹಲಿ ಪೊಲೀಸರು ಸಿದ್ಧತೆಗಳನ್ನು ಪ್ರಾರಂಭಿಸಿದ್ದಾರೆ ಮತ್ತು ಗಡಿಯಲ್ಲಿ ದೊಡ್ಡ ಕ್ರೇನ್‌ಗಳು ಮತ್ತು ಕಂಟೈನರ್‌ಗಳನ್ನು ಇರಿಸಲಾಗಿದೆ.

ಇದನ್ನೂ ಓದಿ: ಶಿಕ್ಷೆಗೊಳಗಾದ ವ್ಯಕ್ತಿಗೆ ಕ್ಷಮಾದಾನ… ಹಂಗೇರಿ ಅಧ್ಯಕ್ಷ ಸ್ಥಾನಕ್ಕೆ ನೊವಾಕ್ ರಾಜೀನಾಮೆ

 

Advertisement

Udayavani is now on Telegram. Click here to join our channel and stay updated with the latest news.

Next