Advertisement

ಹರಿಯಾಣ ಜಿಲ್ಲಾ ಪರಿಷತ್ ಚುನಾವಣೆ; ಬಿಜೆಪಿಗೆ ಶಾಕ್ ನೀಡಿದ ಆಪ್

03:21 PM Nov 28, 2022 | Team Udayavani |

ಚಂಡೀಗಢ: ಹರಿಯಾಣ ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 100 ಸ್ಥಾನಗಳ ಪೈಕಿ 22ರಲ್ಲಿ ಮಾತ್ರ ಗೆಲುವು ಸಾಧಿಸುವ ಮೂಲಕ ಬಿಜೆಪಿ ಹಿನ್ನಡೆ ಅನುಭವಿಸಿದ್ದು, ಎಎಪಿ ಪಕ್ಷದ ಚಿಹ್ನೆಯಲ್ಲಿ ಸ್ಪರ್ಧಿಸಿದ್ದ 100ಕ್ಕೂ ಹೆಚ್ಚು ಸ್ಥಾನಗಳಲ್ಲಿ 15 ಸ್ಥಾನಗಳನ್ನು ಪಡೆಯುವ ಮೂಲಕ ಎರಡನೇ ಸ್ಥಾನದಲ್ಲಿದೆ.

Advertisement

ಭಾನುವಾರದಂದು ಪ್ರಕಟವಾದ ಫಲಿತಾಂಶಗಳಲ್ಲಿ ಭಾರತೀಯ ರಾಷ್ಟ್ರೀಯ ಲೋಕದಳವು ಸ್ವಲ್ಪ ಲಾಭವನ್ನು ಗಳಿಸಿದೆ. ಕಾಂಗ್ರೆಸ್ ಮತ್ತು ಬಿಜೆಪಿಯ ಮಿತ್ರ ಪಕ್ಷವಾದ ಜನನಾಯಕ ಜನತಾ ಪಾರ್ಟಿ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಚಿಹ್ನೆಯ ಮೇಲೆ ಸ್ಪರ್ಧಿಸಲಿಲ್ಲ.

ರಾಜಕೀಯ ತಜ್ಞರ ಪ್ರಕಾರ, ಚುನಾವಣಾ ಫಲಿತಾಂಶವು 2024 ರ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಆಡಳಿತಾರೂಢ ಬಿಜೆಪಿಗೆ ಎಚ್ಚರಿಕೆಯ ಗಂಟೆಯಾಗಿದೆ. ಆದಾಗ್ಯೂ, ರಾಜ್ಯದ ಇತರ ಜಿಲ್ಲೆಗಳಲ್ಲಿ ನಡೆದ ಚುನಾವಣೆಯಲ್ಲಿ 150 ಕ್ಕೂ ಹೆಚ್ಚು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆ ಎಂದು ಪಕ್ಷ ಹೇಳಿಕೊಂಡಿದೆ.

ಹಿಸಾರ್‌ನ ಆದಂಪುರ ಉಪಚುನಾವಣೆಯಲ್ಲಿ ಜಯಗಳಿಸಿದ ಕೆಲವೇ ದಿನಗಳಲ್ಲಿ ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದೆ. ಹರಿಯಾಣದ ಮಾಜಿ ಮುಖ್ಯಮಂತ್ರಿ ಭಜನ್ ಲಾಲ್ ಅವರ ಮೊಮ್ಮಗ, ಬಿಜೆಪಿಯ ಭವ್ಯ ಬಿಷ್ಣೋಯ್ ಈ ತಿಂಗಳ ಆರಂಭದಲ್ಲಿ ನಡೆದ ಉಪಚುನಾವಣೆಯಲ್ಲಿ 15,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದರು.

ಜಿಲ್ಲಾ ಪರಿಷತ್ ಚುನಾವಣಾ ಫಲಿತಾಂಶವು ಪಂಚಕುಲದಲ್ಲಿ ಬಿಜೆಪಿಗೆ ಆಘಾತಕಾರಿಯಾಗಿದ್ದು, ಸ್ಪರ್ಧಿಸಿದ ಎಲ್ಲಾ 10 ಸ್ಥಾನಗಳನ್ನು ಕಳೆದುಕೊಂಡಿದೆ. ಕುರುಕ್ಷೇತ್ರದ ಬಿಜೆಪಿ ಸಂಸದ ನಯಾಬ್ ಸಿಂಗ್ ಸೈನಿ ಅವರ ಪತ್ನಿ ಸುಮನ್ ಸೈನಿ ಅವರು ಅಂಬಾಲಾ ಜಿಲ್ಲಾ ಪರಿಷತ್ತಿನ ವಾರ್ಡ್ ಸಂಖ್ಯೆ 4 ರಿಂದ ಸೋತಿರುವುದು ಪಕ್ಷಕ್ಕೆ ದೊಡ್ಡ ಮುಜುಗರ ಉಂಟು ಮಾಡಿದೆ.

Advertisement

ಗೃಹ ಸಚಿವ ಅನಿಲ್ ವಿಜ್ ಅವರ ತವರು ಜಿಲ್ಲೆಯಾಗಿರುವ ಅಂಬಾಲಾದಲ್ಲಿ ಆಡಳಿತ ಪಕ್ಷವು ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ, ಅಲ್ಲಿ ಒಟ್ಟು 15 ಜಿಲ್ಲಾ ಪರಿಷತ್ ಸ್ಥಾನಗಳಲ್ಲಿ ಕೇವಲ ಎರಡು ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಗಿದೆ. ಗುರುಗ್ರಾಮ್‌ನಲ್ಲಿ 10 ಜಿಲ್ಲಾ ಪರಿಷತ್ ಸ್ಥಾನಗಳ ಪೈಕಿ ನಾಲ್ಕು ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. ಆದಾಗ್ಯೂ, ಯಮುನಾನಗರ, ನುಹ್ ಮತ್ತು ಕುರುಕ್ಷೇತ್ರದಲ್ಲಿ ಆಡಳಿತ ಪಕ್ಷವು ಕ್ರಮವಾಗಿ ಆರು, ಏಳು ಮತ್ತು ಮೂರು ಸ್ಥಾನಗಳನ್ನು ಗೆದ್ದಿದೆ.

ಹರ್ಯಾಣ ಬಿಜೆಪಿ ವಕ್ತಾರ ಸಂಜಯ್ ಶರ್ಮಾ ಮಾತನಾಡಿ, ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಪಕ್ಷ ಉತ್ತಮ ಪ್ರದರ್ಶನ ನೀಡಿದೆ.
15 ಜಿಲ್ಲೆಗಳಲ್ಲಿ ಗೆದ್ದಿರುವ 151 ಅಭ್ಯರ್ಥಿಗಳು ಬಿಜೆಪಿ ಬೆಂಬಲಿತರು ಎಂದು ಹೇಳಿದ್ದಾರೆ. ಚುನಾವಣೆಯಲ್ಲಿ ಗೆದ್ದಿರುವ 126 ಸ್ವತಂತ್ರರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ, 22 ಜಿಲ್ಲಾ ಪರಿಷತ್‌ಗಳಲ್ಲಿ ಒಟ್ಟು 411 ಸದಸ್ಯರಲ್ಲಿ ಬಿಜೆಪಿಗೆ ಸುಮಾರು 300 ವಿಜೇತ ಅಭ್ಯರ್ಥಿಗಳ ಬೆಂಬಲವಿದೆ.

ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಪಕ್ಷದ ಚಿಹ್ನೆಯಲ್ಲಿ ಸ್ಪರ್ಧಿಸಿದ್ದ 100 ಕ್ಕೂ ಹೆಚ್ಚು ಸ್ಥಾನಗಳಲ್ಲಿ 15 ಸ್ಥಾನಗಳನ್ನು ಗೆಲ್ಲುವ ಮೂಲಕ ಅಚ್ಚರಿ ಮೂಡಿಸಿದೆ.

ಜಿಲ್ಲಾ ಪರಿಷತ್ ಚುನಾವಣೆಯಲ್ಲಿ, ಜಜ್ಜರ್, ಹಿಸಾರ್, ರೇವಾರಿ ಮತ್ತು ರೋಹ್ಟಕ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ಹೆಚ್ಚಿನ ಸ್ಥಾನಗಳನ್ನು ಗಳಿಸಿದ್ದಾರೆ.

143 ಪಂಚಾಯತ್ ಸಮಿತಿಗಳು ಮತ್ತು 22 ಜಿಲ್ಲಾ ಪರಿಷತ್‌ಗಳಿಗೆ ಮೂರು ಹಂತಗಳಲ್ಲಿ ಚುನಾವಣೆಗಳು ನಡೆದಿತ್ತು. ಹರಿಯಾಣದಲ್ಲಿ 411 ಸದಸ್ಯರನ್ನು ಒಳಗೊಂಡ 22 ಜಿಲ್ಲಾ ಪರಿಷತ್‌ಗಳನ್ನು ಹೊಂದಿದೆ. ಸದಸ್ಯರು 22 ಜಿಲ್ಲಾ ಪರಿಷತ್ ಮುಖ್ಯಸ್ಥರನ್ನು ಆಯ್ಕೆ ಮಾಡುತ್ತಾರೆ.

Advertisement

Udayavani is now on Telegram. Click here to join our channel and stay updated with the latest news.

Next