Advertisement

ಕೋವಿಡ್ ಸೋಂಕಿನಿಂದ ತಾಯಿಯ ನರಳಾಟ : ಮನನೊಂದ ಪುತ್ರ ಆಸ್ಪತ್ರೆಯಲ್ಲೇ ನೇಣಿಗೆ ಶರಣು

07:59 PM Apr 26, 2021 | Team Udayavani |

ಹಾಸನ : ಕೊರೊನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿಯ ನರಳಾಟ ಕಂಡು ಪುತ್ರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಹಿಮ್ಸ್‌ ಆಸ್ಪತ್ರೆಯ ಕೊರೊನಾ ವಿಭಾಗದ ಕಟ್ಟಡದಲ್ಲಿ ಸೋಮವಾರ ಬೆಳಕಿಗೆ ಬಂದಿದೆ.

Advertisement

ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ಮಾದರೆ ಗ್ರಾಮದ ಶರತ್‌ ಕುಮಾರ್‌ (30) ಅವರು ಹಿಮ್ಸ್‌ ಆಸ್ಪತ್ರೆ 7ನೇ ಮಹಡಿಯಲ್ಲಿರುವ ನೀರಿನ ಟ್ಯಾಂಕ್‌ಗಳ ಪೈಪ್ ಗಳಿಗೆ ನೇಣು ಬಿಗಿದುಕೊಂಡಿದ್ದು, ಸೋಮವಾರ ಬೆಳಗ್ಗೆ ಆಸ್ಪತ್ರೆ ಸಿಬಂದಿ ಸ್ವಚ್ಛಗೊಳಿಸಲು ಹೋಗಿದ್ದಾಗ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸದಲ್ಲಿದ್ದ ಶರತ್‌ ಕುಮಾರ್‌ ಅವರು, ಕೆಲವು ದಿನಗಳ ಹಿಂದೆಯಷ್ಟೇ ಗ್ರಾಮಕ್ಕೆ ಬಂದಿದ್ದರು. 10 ದಿನಗಳ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿದ್ದ ತಾಯಿಯನ್ನು ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಆಕೆ ಚೇತರಿಸಿಕೊಂಡಿಲ್ಲ. ರವಿವಾರ ರಾತ್ರಿ ಸಹೋದರ ಶಶಿಕುಮಾರ್‌ರಿಗೆ ಫೋನ್‌ ಮಾಡಿದ್ದ ಶರತ್‌, “ಅಮ್ಮ ತುಂಬಾ ನೋವು ಅನುಭವಿಸುತ್ತಿದ್ದಾರೆ. ಅದನ್ನು ನೋಡಲು ನನ್ನಿಂದ ಸಾಧ್ಯವಾಗುತ್ತಿಲ್ಲ. ನೀನು ಆಸ್ಪತ್ರೆಗೆ ಬಂದು ಅಮ್ಮನನ್ನು ನೋಡು’ ಎಂದಿದ್ದರು ಎನ್ನಲಾಗಿದೆ. ಸೋಮವಾರ ಬೆಳಗ್ಗೆ ಶಶಿಕುಮಾರ್‌ ಆಸ್ಪತ್ರೆಗೆ ಬಂದು ಫೋನ್‌ ಮಾಡಿದಾಗ ಶರತ್‌ ಕರೆಯನ್ನು ಸ್ವೀಕರಿಸಲಿಲ್ಲ.

ಇದನ್ನೂ ಓದಿ :ಮಂಗಳೂರು ಕಾರಾಗೃಹದಲ್ಲಿ ಹಲ್ಲೆ ಪ್ರಕರಣ : ಕೇರಂ ಬೋರ್ಡ್‌, ಟ್ಯೂಬ್‌ಲೈಟ್‌ನಿಂದ ಆಯುಧ ತಯಾರಿ !

Advertisement

Udayavani is now on Telegram. Click here to join our channel and stay updated with the latest news.

Next