Advertisement

Hasana: ನಾಲ್ಕು ತಿಂಗಳ ಬಳಿಕ ತವರು ಜಿಲ್ಲೆಗೆ ಆ.31ರಂದು ದೇವೇಗೌಡ ಭೇಟಿ

01:02 AM Aug 31, 2024 | Team Udayavani |

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು 4 ತಿಂಗಳ ಅನಂತರ ಶನಿವಾರ ತವರು ಜಿಲ್ಲೆಗೆ ಆಗಮಿಸುತ್ತಿದ್ದು, ಮಾವಿನಕೆರೆ ಬೆಟ್ಟದ ಶ್ರೀ ರಂಗನಾಥ ಸನ್ನಿಧಿಯಲ್ಲಿ ಶ್ರಾವಣ ಶನಿವಾರದ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Advertisement

ಜಮ್ಮು-ಕಾಶ್ಮೀರ ಪ್ರವಾಸದಲ್ಲಿದ್ದ ಗೌಡರು ಶುಕ್ರವಾರ ರಾತ್ರಿ ಬೆಂಗಳೂರಿಗೆ ವಾಪಸ್‌ ಆಗಿದ್ದು, ಶನಿವಾರ ಬೆಳಗ್ಗೆ ಹೊಳೆನರಸೀಪುರಕ್ಕೆ ಆಗಮಿಸಿ ಕುಲದೇವರು ಶ್ರೀ ರಂಗನಾಥ ಸ್ವಾಮಿ ಸನ್ನಿಧಿಯಲ್ಲಿ ಹಾಗೂ ಹರದನಹಳ್ಳಿಯಲ್ಲಿ ಮನೆದೇವರು ಶ್ರೀ ದೇವೇಶ್ವರ ದೇಗುಲದಲ್ಲಿ ಕಡೇ ಶ್ರಾವಣ ಶನಿವಾರದ ವಿಶೇಷ ಪೂಜೆ ಸಲ್ಲಿಸುವರು ಎಂದು ಜಿಲ್ಲಾ ಜೆಡಿಎಸ್‌ ವಕ್ತಾರ ರಘು ಹೊಂಗೆರೆ ತಿಳಿಸಿದ್ದಾರೆ.

ಎ. 26ರಂದು ಪಡುವಲಹಿಪ್ಪೆ ಮತಗಟ್ಟೆಯಲ್ಲಿ ಮತದಾನದ ಅನಂತರ ಪ್ರಜ್ವಲ್‌ ಸೋಲು ಸೇರಿ ಕುಟುಂಬಕ್ಕೆ ಎದುರಾಗಿದ್ದ ಮುಜುಗರದ ಬೆಳವಣಿಗೆಗೆಳ ಹಿನ್ನೆಲೆಯಲ್ಲಿ ದೇವೇಗೌಡರು ಜಿಲ್ಲೆಯತ್ತ ತಲೆ ಹಾಕಿರಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next