Advertisement

ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದು ಹಾಸನ ನಗರಸಭೆ ಜೆಡಿಎಸ್ ಸದಸ್ಯನ ಬರ್ಬರ ಹತ್ಯೆ

09:17 PM Jun 01, 2022 | Team Udayavani |

ಹಾಸನ : ಹಾಸನ ನಗರಸಭೆ ಜೆಡಿಎಸ್ ಸದಸ್ಯ ಪ್ರಶಾಂತ್ ನಾಗರಾಜ್ (40) ಅವರನ್ನು ಬುಧವಾರ ಸಂಜೆ ನಗರದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

Advertisement

ಪ್ರಶಾಂತ್ ಅವರು ನಗರದಿಂದ ಅಡ್ಲಿಮನೆ ರಸ್ತೆಯಲ್ಲಿರುವ ತಮ್ಮ ಮನೆಗೆ ಹೋಂಡಾ ಅಕ್ಟೀವಾ ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಆಟೋದಲ್ಲಿ ಬಂದ ನಾಲ್ಕೈದು ಮಂದಿ ದುಷ್ಕರ್ಮಿಗಳು ನಗರದ ಜವೇನಹಳ್ಳಿ ಮಠದ ಸಮೀಪ ಮಚ್ಚು, ಲಾಂಗ್ ಗಳಿಂದ ಕೊಚ್ಚಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

15 ವರ್ಷಗಳ ಹಿಂದೆ ಪ್ರಶಾಂತ್ ನಾಗರಾಜ್ ತಂದೆ ನಗರಸಭಾ ಮಾಜಿ ಸದಸ್ಯ ಹಾ.ರಾ.ನಾಗರಾಜ್ ಅವರನ್ನು ಹತ್ಯೆ ಮಾಡಲಾಗಿತ್ತು.

ಈಗ ದ್ವೇಷ ಸಾಧನೆ ಹಿನ್ನೆಯಲ್ಲಿಯೇ ಪ್ರಶಾಂತ್ ಅವರ ಮನೆ ಪರಿಸರದ ಪುಂಡರ ಗ್ಯಾಂಗ್ ಈ ದುಷ್ಕೃತ್ಯ ಮಾಡಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ : ವಿದ್ಯಾರ್ಥಿನಿ ಜೊತೆ ಮದುವೆಯ ನಾಟಕವಾಡಿ ದೈಹಿಕ ಸಂಪರ್ಕ ಬೆಳೆಸಿ ಕೈ ಕೊಟ್ಟ ಹಾಸ್ಟೆಲ್ ವಾರ್ಡನ್

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next