Advertisement

ಕ್ಷುಲ್ಲಕ ವಿಚಾರಕ್ಕೆ ಪತ್ನಿಯನ್ನು ಕೊಲೆಗೈದು, ಆತ್ಮಹತ್ಯೆಗೆ ಶರಣಾದ ಪತಿ

11:41 PM Feb 18, 2021 | sudhir |

ಹಾಸನ: ಕ್ಷುಲ್ಲಕ ಕಾರಣಕ್ಕೆ ಗಂಡನೇ ಹೆಂಡತಿಯನ್ನು ಕೊಲೆಗೈದಿದ್ದು, ಬಳಿಕ ತಾನು ಆತ್ಮಹತ್ಯೆಗೆ ಶರಣಾಗಿರೋ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

Advertisement

ಹಾಸನ ತಾಲ್ಲೂಕಿನ ಶಾಂತಿಗ್ರಾಮದಲ್ಲಿ ಇಂತಹುದೊಂದು ಧಾರುಣ ಘಟನೆ ನಡೆದಿದ್ದು,  ಸ್ವತಃ ತನ್ನ ಮಡದಿಯಾದ ಅನ್ನಪೂರ್ಣ(30)ಳನ್ನು ಕೊಲೆ ಮಾಡಿದ್ದಾನೆ. ಕೊಲೆಗೆ ಕೌಟುಂಬಿಕ ಸಮಸ್ಯೆಯೇ ಕಾರಣ ಎಂಬ ಮಾತು ಕೇಳಿ ಬಂದಿದ್ದು, ಬಳಿಕ ತಾನು ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡವನನ್ನು ತುಳಿಸಿದಾಸ್ (40) ಎಂದು ಗುರುತಿಸಲಾಗಿದೆ. ಈತ ಹಾಸನದ ಎಟಿಎಂ ಒಂದರಲ್ಲಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದು, ಇಂದು ಮಧ್ಯಾಹ್ನ ತುಳಿಸಿದಾಸ್ ತನ್ನ ಪತ್ನಿಯನ್ನ ಜಮೀನಿಗೆ ಜೊತೆಯಲ್ಲಿಯೇ ಕರೆದುಕೊಂಡು ಹೋಗಿದ್ದ. ಈ ಸಮಯದಲ್ಲಿ ಇಬ್ಬರಿಗೂ ಸ್ವಲ್ಪಹೊತ್ತು ಜಗಳವಾಗಿದೆ ಎನ್ನಲಾಗಿದೆ. ಬಳಿಕ ಆತ ಆಕೆಯನ್ನ ಚಾಕುವಿನಿಂದ ಕುತ್ತಿಗೆಗೆ ಚುಚ್ಚಿ ಕೊಲೆ ಮಾಡಿದ್ದಾನೆ.

ಇದನ್ನೂ ಓದಿ:ಬೆಳಗಾವಿ : ಸಿಡಿಲು ಬಡಿದು ಕಾರ್ಮಿಕ ಸಾವು

Advertisement

ಮೂರು ತಿಂಗಳ ಹಿಂದೆ ಮೈಸೂರು ಮೂಲದ ಅನ್ನಪೂರ್ಣಳನ್ನ ಮದುವೆಯಾಗಿದ್ದ ತುಳಸಿದಾಸ, 1 ಒಂದು ತಿಂಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದ ತುಳಿಸಿದಾಸ್ ಸಂಸಾರದಲ್ಲಿ 15 ದಿನಗಳಿಂದ ವಿರಸ ಮೂಡಿತ್ತು. ವಾರದಿಂದ ಮನೆಯಲ್ಲಿಯೂ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಇನ್ನು ಸ್ಥಳಕ್ಕೆ ಪೊಲೀಸರು ಆಗಮಿಸಿ ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದು, ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next