Advertisement

ಲಾರಿಗೆ ಕಾರು ಡಿಕ್ಕಿ : ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು, ಓರ್ವನ ಸ್ಥಿತಿ ಗಂಭೀರ

08:35 PM Jun 19, 2021 | Team Udayavani |

ಹಾಸನ : ನಗರದ ಹೊರ ವಲಯ ಕೆಂಚಟ್ಟಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ- 75 ರಲ್ಲಿ ಶನಿವಾರ ಸಂಜೆ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ‌ ಸ್ಥಿತಿ ಗಂಭೀರವಾಗಿದೆ.

Advertisement

ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಮೃತರಾಗಿದ್ದು ಮೃತರಲ್ಲಿ ಓರ್ವನ ಗುರುತು ಪತ್ತೆಯಾಗಿದ್ದು, ಬೆಳ್ತಂಗಡಿ ಮೂಲದ ಯೋಗೇಶ್ ಸಾವನ್ನಪ್ಪಿದವರ ಪೈಕಿ ಒಬ್ಬರು.

ಕೆಎ-19 ಎಂಜಿ 7021 ನಂಬರಿನ ಕ್ವಿಡ್ ಕಾರು ಕೆಂಚಟ್ಟಹಳ್ಳಿ ಬಳಿ ಹಂಪ್ಸ್ ಇದ್ದ ಕಾರಣ ಲಾರಿ ಚಾಲಕ ದಿಢೀರ್ ಬ್ರೇಕ್ ಹಾಕಿದ ಪರಿಣಾಮ ಲಾರಿ ಹಿಂದೆ ವೇಗವಾಗಿ ಬರುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ :ಐದು ವಿಶೇಷ ಪ್ರೀಪೇಯ್ಡ್ ಡೇಟಾ ಪ್ಲ್ಯಾನ್ ಪರಿಚಯಿಸಿದ ಜಿಯೋ..! ಮಾಹಿತಿ ಇಲ್ಲಿದೆ.

ಗಾಯಾಳು ಜಿಲ್ಲಾಸ್ಪತ್ರೆಗೆ ರವಾನಿಸಿದ್ದು ಸ್ಥಳಕ್ಕೆ ಹಾಸನ ಸಂಚಾರಿ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ

Advertisement
Advertisement

Udayavani is now on Telegram. Click here to join our channel and stay updated with the latest news.

Next