Advertisement

ಹಾಸನಾಂಬ ಜಾತ್ರಾ ಮಹೋತ್ಸವ ಸಂಪನ್ನ

07:51 PM Nov 06, 2021 | Team Udayavani |

ಹಾಸನ: ಕಳೆದ 10 ದಿನಗಳಿಂದ ನಡೆದ ಶ್ರೀ ಹಾಸನಾಂಬ ಹಾಗೂ ಶ್ರೀ ಸಿದ್ಧೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಶನಿವಾರ ಸಂಪನ್ನ ಗೊಂಡಿತು.

Advertisement

ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಶ್ರೀ ಹಾಸನಾಂಬ ದೇವಾಲಯದ ಬಾಗಿಲನ್ನು ಶನಿವಾರ ಮಧ್ಯಾಹ್ನ 12.58 ಗಂಟೆಗೆ ಶಾಸ್ತ್ರೋಕ್ತವಾಗಿ ಮುಚ್ಚಲಾಯಿತು.

ಅ.28ರಂದು ಮಧ್ಯಾಹ್ನ 12 .30 ಗಂಟೆಗೆ ಹಾಸನಾಂಬ ದೇವಾಲಯದ ಬಾಗಿಲನ್ನು ತೆರೆಯಲಾಗಿತ್ತು. ಒಟ್ಟು 10 ದಿನ ಬಾಗಿಲು ತೆರೆದಿದ್ದರೂ ಅಧಿಕೃತವಾಗಿ ಭಕ್ತರಿಗೆ 8 ದಿನ ಮಾತ್ರ ದೇವಿಯ ದರ್ಶನಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿತ್ತು.

ಈ ವರ್ಷ ಸುಮಾರು 4 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆಯ ದರ್ಶನ ಪಡೆದಿರುವ ಅಂದಾಜಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಇದನ್ನೂ ಓದಿ:ಬಂಟ್ವಾಳ: ಅತ್ಯಾಚಾರ ಎಸಗಿ, ಜೀವ ಬೆದರಿಕೆ; ಆರೋಪಿಗಳ ಬಂಧನ

Advertisement

 

Advertisement

Udayavani is now on Telegram. Click here to join our channel and stay updated with the latest news.

Next