Advertisement

ಹಾಸನ ಜಿಲ್ಲಾಧಿಕಾರಿಯಾಗಿ ಡಾ|ಪಿ.ಸಿ.ಜಾಫ‌ರ್‌ ನೇಮಕ

06:00 AM Apr 25, 2018 | |

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಮತ್ತೆ ವರ್ಗಾವಣೆಯಾಗಿದ್ದಾರೆ. ರೋಹಿಣಿ ಸಿಂಧೂರಿ ವರ್ಗಾವಣೆ ಬಳಿಕ ಜಿಲ್ಲಾಧಿಕಾರಿಯಾಗಿದ್ದ ಡಿ.ರಂದೀಪ್‌ ಅವರನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ಬದಲಾ ಯಿಸಿರುವ ರಾಜ್ಯ ಸರಕಾರ ಇದೀಗ
ಡಾ| ಪಿ.ಸಿ.ಜಾಫ‌ರ್‌ ಅವರನ್ನು ನೇಮಿಸಿದೆ. ಇದರೊಂದಿಗೆ ಹಾಸನ ಜಿಲ್ಲಾಧಿಕಾರಿ ವಿವಾದಕ್ಕೆ ತಾತ್ಕಾಲಿಕ ತೆರೆ ಬಿದ್ದಂತಾಗಿದ್ದು, ತಮ್ಮ ವರ್ಗಾವಣೆ ಪ್ರಶ್ನಿಸಿ ರೋಹಿಣಿ ಸಿಂಧೂರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿ ಸಿದಂತೆ ಹೈಕೋರ್ಟ್‌ ನೀಡುವ ಆದೇಶದ ಮೇಲೆ ಮುಂದಿನ ಬೆಳವಣಿಗೆಗಳು ನಡೆಯಲಿವೆ.

Advertisement

ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಜ. 22ರಂದು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿತ್ತು. ಆದರೆ ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ವರ್ಗಾವಣೆ ಮಾಡಿದ್ದರಿಂದ ಚುನಾವಣಾ ಆಯೋಗ ಈ ವರ್ಗಾವಣೆ ತಡೆಹಿಡಿದಿತ್ತು. ಹೀಗಾಗಿ ಸರಕಾರ ವರ್ಗಾವಣೆ ಆದೇಶ ಹಿಂಪಡೆದಿತ್ತು. ಅನಂತರ ಮಾ. 8ರಂದು ಮತ್ತೆ ಅವರನ್ನು ವರ್ಗಾವಣೆಗೊಳಿಸಿ ಆ ಜಾಗಕ್ಕೆ ರಂದೀಪ್‌ ಅವರನ್ನು ನೇಮಿಸಲಾಗಿತ್ತು.

ರಂದೀಪ್‌ ವರ್ಗಾವಣೆ ಸಮರ್ಥನೆ 
ಚುನಾವಣಾ ಕರ್ತವ್ಯಕ್ಕೆ ಚ್ಯುತಿ ಬರುವ ರೀತಿಯಲ್ಲಿ ನಡೆದುಕೊಂಡಿದ್ದರಿಂದ ಹಾಸನ ಜಿಲ್ಲಾಧಿಕಾರಿ ರಂದೀಪ್‌ ಅವರನ್ನು ವರ್ಗಾವಣೆಗೊಳಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್‌ ಹೇಳಿದ್ದಾರೆ. ಕೆಲವು ಆಡಳಿತಾತ್ಮಕ ಸೂಕ್ಷ್ಮ ವಿಚಾರಗಳನ್ನು ಬಹಿರಂಗವಾಗಿ ಹೇಳಿಕೊಂಡಿರುವ ಹಾಸನ ಜಿಲ್ಲಾಧಿಕಾರಿ ನಡವಳಿಕೆ ಸರಿಯಲ್ಲ ಎಂದವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next