Advertisement

Hassan ಪ್ರೀತಂ ಗೌಡ ಮನವೊಲಿಕೆ ಮುಂದುವರಿಕೆ

11:21 PM Apr 05, 2024 | Team Udayavani |

ಹಾಸನ: ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪರ ಚುನಾವಣ ಪ್ರಚಾರ ಕಾರ್ಯದಲ್ಲಿ ಪದೇಪದೆ ಗೈರಾಗುವ ಮೂಲಕ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂ ಗೌಡ ಅವರು ಬಿಜೆಪಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದ್ದಾರೆ.

Advertisement

ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಸುವಾಗ ಗೈರಾಗಿದ್ದ ಪ್ರೀತಂ ಗೌಡ, ಬಳಿಕ ಮೊದಲ ಬಾರಿಗೆ ಹಾಸನದಲ್ಲಿ ನಡೆದ ಜೆಡಿಎಸ್‌-ಬಿಜೆಪಿ ಸಮನ್ವಯ ಸಮಿತಿ ಸಭೆಗೂ ಗೈರಾಗಿದ್ದರು.

ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗಮಿಸಿದಾಗಲೂ ಪ್ರೀತಂ ಗೌಡ ಗೈರಾಗಿದ್ದರು.

ಚುನಾವಣೆಗೆ ಕೆಲವೇ ದಿನಗಳು ಮಾತ್ರ ಉಳಿದಿವೆ. ಮೈತ್ರಿ ಅಭ್ಯರ್ಥಿ ಗೆಲುವಿಗೆ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಮುಖಂ ಡರಾದ ಸಿ.ಟಿ.ರವಿ. ಎಂ.ಕೆ. ಪ್ರಾಣೇಶ್‌ ಅವರು ಪ್ರೀತಂ ಮನ ವೊಲಿಸುವ ಪ್ರಯತ್ನ ನಡೆಸಿದ್ದಾರೆ. ಆದರೆ ಪ್ರೀತಂ ಗೌಡ ಮುನಿಸು ಮುರಿಯುವ ಸಾಧ್ಯತೆ ಕಡಿಮೆ. ಹಾಗಾಗಿ ಅವರನ್ನು ಪ್ರಚಾರಕ್ಕೆ ಕರೆತರಲಾಗದೆ, ಇತ್ತ ಜೆಡಿಎಸ್‌ ಮುಖಂಡರಿಗೂ ಉತ್ತರಿಸಲಾಗದೆ ಇಕ್ಕಟ್ಟಿಗೆ ಸಿಲುಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next