Advertisement

Hate speech ಪ್ರಚಾರ: ಮೋದಿ ವಿರುದ್ಧ ಕ್ರಮಕ್ಕೆ ಸುಪ್ರೀಂನಲ್ಲಿ ರಿಟ್‌ ಅರ್ಜಿ

01:15 AM May 10, 2024 | Team Udayavani |

ಹೊಸದಿಲ್ಲಿ: ಪ್ರಚಾರದ ವೇಳೆ ದ್ವೇಷ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣ ಆಯೋಗಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ಗೆ ಗುರುವಾರ ರಿಟ್‌ ಅರ್ಜಿ ಸಲ್ಲಿಕೆಯಾಗಿದೆ. ಮಾಜಿ ಐಎಎಸ್‌ ಅಧಿಕಾರಿ ಇಎಎಸ್‌ ಶರ್ಮಾ, ಐಐಎಂನ ಮಾಜಿ ಡೀನ್‌ ತ್ರಿಲೋಚನ ಶಾಸ್ತ್ರೀ ಈ ಅರ್ಜಿ ದಾಖಲಿಸಿದ್ದಾರೆ. ಮೇ 21ರ ಪ್ರಧಾನಿ ಭಾಷಣ, ಮೇ 27ರ ಅನುರಾಗ್‌ ಠಾಕೂರ್‌ ಭಾಷಣವನ್ನು ಸೋಶಿಯಲ್‌ ಮೀಡಿಯಾಗಳಲ್ಲಿ ಹಂಚಿಕೆಯಾಗುತ್ತಿದ್ದು, ಅವು ದ್ವೇಷದಿಂದ ಕೂಡಿವೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ. ನೀತಿ ಸಂಹಿತೆ ಉಲ್ಲಂ ಸಿ ಭಾಷಣಗಳನ್ನು ಮಾಡುತ್ತಿದ್ದರೂ ಆಯೋಗವು ಕಣ್ಣುಮುಚ್ಚಿ ಕುಳಿತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next