Advertisement

CT Ravi: ದ್ವೇಷಪೂರಿತ ಹೇಳಿಕೆ; ಸಿ.ಟಿ.ರವಿ ವಿರುದ್ಧ ದೂರು ದಾಖಲು

10:31 PM Mar 21, 2024 | Team Udayavani |

ಚಿಕ್ಕಮಗಳೂರು: ರಾಹುಲ್‌ ಗಾಂಧಿ  ವಿರುದ್ಧ ಸಿ.ಟಿ.ರವಿ ದ್ವೇಷದ ಹೇಳಿಕೆ ನೀಡಿದ್ದು, ಇದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣ ನಿರ್ವಹಣ ಸಮಿತಿ ನೋಡೆಲ್‌ ಅಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Advertisement

ರಾಹುಲ್‌ ಗಾಂಧಿ ಹೇಳಿಕೆಗೆ ಮಾಜಿ ಸಚಿವ ಸಿ.ಟಿ.ರವಿ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಟೀಕಿಸಿ ಪೋಸ್ಟ್‌ ಹಾಕಿದ್ದರು. ಇದು ದ್ವೇಷಪೂರಿತ ಪೋಸ್ಟ್‌ ಎಂದು ಪರಿಗಣಿಸಿ ಮುಖ್ಯ ಚುನಾವಣಾಧಿ ಕಾರಿ ಕಚೇರಿ ಸಾಮಾಜಿಕ ಜಾಲತಾಣ ಮಾಧ್ಯಮದ ನೋಡಲ್‌ ಅ ಧಿಕಾರಿಯೊಬ್ಬರು ಚಿಕ್ಕಮಗಳೂರು ಜಿಲ್ಲಾಧಿ ಕಾರಿಗೆ ಕ್ರಮ ಕೈಗೊಂಡು ವರದಿ ನೀಡುವಂತೆ ಆದೇಶಿಸಿದ್ದರು. ಈ ಆದೇಶದ ಮೇರೆಗೆ ಸಾಮಾಜಿಕ ಜಾಲತಾಣ ಮೇಲ್ವಿಚಾರಣ ಸಮಿತಿ ಸಹಾಯಕ ಚುನಾವಣಾಧಿಕಾರಿ ಜಯಲಕ್ಷ್ಮಮ್ಮ  ಅವರು ಬುಧವಾರ ರಾತ್ರಿ ಚಿಕ್ಕಮಗಳೂರು ನಗರ ಠಾಣೆಗೆ ದೂರು ನೀಡಿದ್ದು, ಪೊಲೀಸರು ಸಿ.ಟಿ.ರವಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next